ಸುಪ್ರೀಂ ಕೋರ್ಟ್ 
ದೇಶ

'ಭಾರತದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಲು ಇದೇ ಕಾರಣ': ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ಸರ್ಕಾರವೇ ಕಾರಣವಾಗದ್ದು. ಸೂಕ್ತ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ಸರ್ಕಾರವೇ ಕಾರಣವಾಗದ್ದು. ಸೂಕ್ತ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್ ಎಸ್ ರೆಡ್ಡಿ ಮತ್ತು ಎಂ ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠವು, 'ಕೋವಿಡ್-19 ವಿರುದ್ಧ ವಿಶ್ವ ಸಮರ ನಡೆಯುತ್ತಿದೆ. ಕೊರೋನಾ ಸಾಂಕ್ರಾಮಿಕದಿಂದಾಗಿ ವಿಶ್ವದ ಪ್ರತಿಯೊಬ್ಬರೂ  ಒಂದಲ್ಲ ಒಂದು ರೀತಿಯಲ್ಲಿ ಬಳಲುತ್ತಿದ್ದಾರೆ. ಕರ್ಫ್ಯೂ ಅಥವಾ ಲಾಕ್ ಡೌನ್ ವಿಧಿಸುವ ಯಾವುದೇ ನಿರ್ಧಾರವನ್ನು ಬಹಳ ಹಿಂದೆಯೇ ಘೋಷಿಸಬೇಕು, ಇದರಿಂದ ಜನರು ಲಾಕ್ ಡೌನ್ ಸಿದ್ದರಾಗಲು ನೆರವಾಗುತ್ತದೆ. ಅಗತ್ಯ ವಸ್ತುಗಳ ಶೇಖರಣೆಗೆ ಸಾಧ್ಯವಾಗುತ್ತದೆ. ಅವರ ಜೀವನೋಪಾಯಕ್ಕೆ ಅವಕಾಶ ಕಲ್ಪಿಸಬಹುದು ಎಂದು ಪೀಠ  ಅಭಿಪ್ರಾಯಪಟ್ಟಿದೆ.

ಇದೇ ವೇಳೆ ವೈದ್ಯರು ಮತ್ತು ದಾದಿಯರು ಸೇರಿದಂತೆ ಮುಂಚೂಣಿಯ ಆರೋಗ್ಯ ಕಾರ್ಯಕರ್ತರು ಈಗಾಗಲೇ ಎಂಟು ತಿಂಗಳ ಕಾಲ ದಣಿವರಿಯದ ಕೆಲಸದಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರಿಗೆ ಮಧ್ಯಂತರ ವಿಶ್ರಾಂತಿ ನೀಡಲು ಕೆಲವು ಕಾರ್ಯವಿಧಾನಗಳು  ಬೇಕಾಗಬಹುದು. ಈ ಕುರಿತಂತೆ ಸರ್ಕಾರ ಸೂಕ್ತ ಮಾರ್ಗೋಪಾಯ ಸಿದ್ಧಪಡಿಸಬೇಕು ಎಂದು ಹೇಳಿದೆ.

ಅಂತೆಯೇ ಈ ಸಾಂಕ್ರಾಮಿಕ ಸಮಯದಲ್ಲಿ ಪ್ರತಿ ರಾಜ್ಯವು ಜಾಗರೂಕತೆಯಿಂದ ವರ್ತಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಸಾಮರಸ್ಯದಿಂದ ಕೆಲಸ ಮಾಡಬೇಕು. ಇದು ಸಂದರ್ಭಕ್ಕೆ ತಕ್ಕಂತೆ ಸ್ಪಂದಿಸುವ ಸಮಯ. ನಾಗರಿಕರ  ಸುರಕ್ಷತೆ ಮತ್ತು ಆರೋಗ್ಯವು ಇತರ ಯಾವುದೇ ಪರಿಗಣನೆಗಳಿಗಿಂತ ಮೊದಲ ಆದ್ಯತೆಯಾಗಿರಬೇಕು. ದೇಶಾದ್ಯಂತ ಕೋವಿಡ್ ಮಾರ್ಗಸೂಚಿಗಳು ಮತ್ತು ಎಸ್‌ಒಪಿಗಳ ಅನುಷ್ಠಾನಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಉನ್ನತ ನ್ಯಾಯಾಲಯವು ಹೆಚ್ಚಿನ  ನಿರ್ದೇಶನಗಳನ್ನು ನೀಡಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT