ಸುಪ್ರೀಂ ಕೋರ್ಟ್ 
ದೇಶ

'ಭಾರತದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಲು ಇದೇ ಕಾರಣ': ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ಸರ್ಕಾರವೇ ಕಾರಣವಾಗದ್ದು. ಸೂಕ್ತ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ಸರ್ಕಾರವೇ ಕಾರಣವಾಗದ್ದು. ಸೂಕ್ತ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್ ಎಸ್ ರೆಡ್ಡಿ ಮತ್ತು ಎಂ ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠವು, 'ಕೋವಿಡ್-19 ವಿರುದ್ಧ ವಿಶ್ವ ಸಮರ ನಡೆಯುತ್ತಿದೆ. ಕೊರೋನಾ ಸಾಂಕ್ರಾಮಿಕದಿಂದಾಗಿ ವಿಶ್ವದ ಪ್ರತಿಯೊಬ್ಬರೂ  ಒಂದಲ್ಲ ಒಂದು ರೀತಿಯಲ್ಲಿ ಬಳಲುತ್ತಿದ್ದಾರೆ. ಕರ್ಫ್ಯೂ ಅಥವಾ ಲಾಕ್ ಡೌನ್ ವಿಧಿಸುವ ಯಾವುದೇ ನಿರ್ಧಾರವನ್ನು ಬಹಳ ಹಿಂದೆಯೇ ಘೋಷಿಸಬೇಕು, ಇದರಿಂದ ಜನರು ಲಾಕ್ ಡೌನ್ ಸಿದ್ದರಾಗಲು ನೆರವಾಗುತ್ತದೆ. ಅಗತ್ಯ ವಸ್ತುಗಳ ಶೇಖರಣೆಗೆ ಸಾಧ್ಯವಾಗುತ್ತದೆ. ಅವರ ಜೀವನೋಪಾಯಕ್ಕೆ ಅವಕಾಶ ಕಲ್ಪಿಸಬಹುದು ಎಂದು ಪೀಠ  ಅಭಿಪ್ರಾಯಪಟ್ಟಿದೆ.

ಇದೇ ವೇಳೆ ವೈದ್ಯರು ಮತ್ತು ದಾದಿಯರು ಸೇರಿದಂತೆ ಮುಂಚೂಣಿಯ ಆರೋಗ್ಯ ಕಾರ್ಯಕರ್ತರು ಈಗಾಗಲೇ ಎಂಟು ತಿಂಗಳ ಕಾಲ ದಣಿವರಿಯದ ಕೆಲಸದಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರಿಗೆ ಮಧ್ಯಂತರ ವಿಶ್ರಾಂತಿ ನೀಡಲು ಕೆಲವು ಕಾರ್ಯವಿಧಾನಗಳು  ಬೇಕಾಗಬಹುದು. ಈ ಕುರಿತಂತೆ ಸರ್ಕಾರ ಸೂಕ್ತ ಮಾರ್ಗೋಪಾಯ ಸಿದ್ಧಪಡಿಸಬೇಕು ಎಂದು ಹೇಳಿದೆ.

ಅಂತೆಯೇ ಈ ಸಾಂಕ್ರಾಮಿಕ ಸಮಯದಲ್ಲಿ ಪ್ರತಿ ರಾಜ್ಯವು ಜಾಗರೂಕತೆಯಿಂದ ವರ್ತಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಸಾಮರಸ್ಯದಿಂದ ಕೆಲಸ ಮಾಡಬೇಕು. ಇದು ಸಂದರ್ಭಕ್ಕೆ ತಕ್ಕಂತೆ ಸ್ಪಂದಿಸುವ ಸಮಯ. ನಾಗರಿಕರ  ಸುರಕ್ಷತೆ ಮತ್ತು ಆರೋಗ್ಯವು ಇತರ ಯಾವುದೇ ಪರಿಗಣನೆಗಳಿಗಿಂತ ಮೊದಲ ಆದ್ಯತೆಯಾಗಿರಬೇಕು. ದೇಶಾದ್ಯಂತ ಕೋವಿಡ್ ಮಾರ್ಗಸೂಚಿಗಳು ಮತ್ತು ಎಸ್‌ಒಪಿಗಳ ಅನುಷ್ಠಾನಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಉನ್ನತ ನ್ಯಾಯಾಲಯವು ಹೆಚ್ಚಿನ  ನಿರ್ದೇಶನಗಳನ್ನು ನೀಡಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT