ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ಭವಿಷ್ಯದಲ್ಲಿ ದೇಶಕ್ಕೆ ಭದ್ರತೆಯ ಸಮಸ್ಯೆ ಎದುರಾಗಲೂಬಹುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಿಲಿಟರಿ ಸಾಹಿತ್ಯವನ್ನು ಸಾಮಾನ್ಯ ಜನತೆಯೊಂದಿಗೆ ಸಂಪರ್ಕಿಸುವ ಬಗ್ಗೆ ನನಗೆ ಅತೀವ ಆಸಕ್ತಿಯಿದೆ, ನಮ್ಮ ಮುಂದಿನ ಜನಾಂಗ ದೇಶದ ಇತಿಹಾಸದ ಬಗ್ಗೆ ಅರ್ಥ ಮಾಡಿಕೊಳ್ಳಲು, ಅದರಲ್ಲೂ ವಿಶೇಷವಾಗಿ ಗಡಿಭಾಗಗಳ ಬಗ್ಗೆ ತಿಳಿದುಕೊಳ್ಳಲು ಇದು ಸಹಾಯವಾಗಬಹುದು ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಿಲಿಟರಿ ಸಾಹಿತ್ಯವನ್ನು ಸಾಮಾನ್ಯ ಜನತೆಯೊಂದಿಗೆ ಸಂಪರ್ಕಿಸುವ ಬಗ್ಗೆ ನನಗೆ ಅತೀವ ಆಸಕ್ತಿಯಿದೆ, ನಮ್ಮ ಮುಂದಿನ ಜನಾಂಗ ದೇಶದ ಇತಿಹಾಸದ ಬಗ್ಗೆ ಅರ್ಥ ಮಾಡಿಕೊಳ್ಳಲು, ಅದರಲ್ಲೂ ವಿಶೇಷವಾಗಿ ಗಡಿಭಾಗಗಳ ಬಗ್ಗೆ ತಿಳಿದುಕೊಳ್ಳಲು ಇದು ಸಹಾಯವಾಗಬಹುದು ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅವರು ಇಂದು ಮಿಲಿಟರಿ ಸಾಹಿತ್ಯ ಸಮ್ಮೇಳನ-2020ನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡುತ್ತಾ, ಇನ್ನೊಂದು ದೃಷ್ಟಿಕೋನದ ಮೂಲಕವೂ ಈ ಕಾರ್ಯಕ್ರಮ ಬಹಳ ಮುಖ್ಯವಾಗುತ್ತದೆ. ಕಾಲ ಬದಲಾಗುತ್ತಿದ್ದಂತೆ ನಮ್ಮ ದೇಶದ ಮೇಲಾಗುತ್ತಿರುವ ಬೆದರಿಕೆಗಳು ಮತ್ತು ಯುದ್ಧದ ರೀತಿಗಳು ಬದಲಾಗುತ್ತಿರುತ್ತವೆ. ಭವಿಷ್ಯದಲ್ಲಿ ನಾವು ಹೆಚ್ಚೆಚ್ಚು ಭದ್ರತೆ ಕುರಿತ ವಿಷಯಗಳಿಗೆ ಆದ್ಯತೆ ನೀಡಬೇಕಾಗಬಹುದು ಎಂದು ಅಭಿಪ್ರಾಯಪಟ್ಟರು.

ನಾನು ರಕ್ಷಣಾ ಇಲಾಖೆ ಸಚಿವನಾದ ನಂತರ ಸಮಿತಿಯನ್ನು ರಚಿಸಿದೆ. ಅದು ನಮ್ಮ ಗಡಿಭಾಗದ ಇತಿಹಾಸ ಮತ್ತು ಅದಕ್ಕೆ ಸಂಬಂಧಪಟ್ಟ ಯುದ್ಧಗಳ ಬಗ್ಗೆ ಜನರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ತಿಳಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT