ಉತ್ತರಾಖಂಡ್ ರಾಜ್ಯ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ 
ದೇಶ

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಗೆ ಕೊರೋನಾ ಪಾಸಿಟಿವ್!

ಈ ಹಿಂದೆ ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಅಗತ್ಯ ಮುಂಜಾಗ್ರತೆ ವಹಿಸಿ ಕುಂಭಮೇಳ ನಡೆಸುತ್ತೇವೆ ಎಂದು ಹೇಳಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಡೆಹರಾಡೂನ್: ಈ ಹಿಂದೆ ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಅಗತ್ಯ ಮುಂಜಾಗ್ರತೆ ವಹಿಸಿ ಕುಂಭಮೇಳ ನಡೆಸುತ್ತೇವೆ ಎಂದು ಹೇಳಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಈ ಬಗ್ಗೆ ಸ್ವತಃ ತ್ರಿವೇಂದ್ರ ಸಿಂಗ್ ರಾವತ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನನ್ನ ಕೋವಿಡ್-19 ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದು, ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಪ್ರಸ್ತುತ ನನ್ನ ಆರೋಗ್ಯ  ಉತ್ತಮವಾಗಿದ್ದು, ನನಗೆ ಯಾವುದೇ ಲಕ್ಷಣಗಳಿಲ್ಲ. ಅದಾಗ್ಯೂ ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು  ಹೇಳಿದ್ದಾರೆ.

ಈ ಹಿಂದೆ ಇದೇ ತ್ರಿವೇಂದ್ರ ಸಿಂಗ್ ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಕುಂಭಮೇಳ ನಡೆಸುವುದಾಗಿ ಹೇಳಿದ್ದರು. ಅಖಿಲ ಭಾರತೀಯ ಅಖಡಾ ಪರಿಷತ್ ನ(ಎಬಿಎಪಿ)  ಸಭೆಯಲ್ಲಿ ಭಾಗವಹಿಸಿದ ನಂತರ ರಾವತ್ ಈ ನಿರ್ಧಾರ ಘೋಷಣೆ ಮಾಡಿದ್ದರು.  

2021ರ ಜನವರಿ 14ರಿಂದ ಕುಂಭಮೇಳ ಆರಂಭವಾಗಲಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT