ರೈತರ ಪ್ರತಿಭಟನೆ 
ದೇಶ

ಮೃತ ರೈತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕೆ ಕಿಸಾನ್ ಕಾಂಗ್ರೆಸ್ ಒತ್ತಾಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್- ಹರ್ಯಾಣ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟಿರುವ 22 ರೈತರಿಗೆ ತಲಾ 1 ಕೋಟಿ ರೂಪಾಯಿಗಳನ ಪರಿಹಾರವಾಗಿ ನೀಡಬೇಕು ಎಂದು ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.

 ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್- ಹರ್ಯಾಣ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟಿರುವ 22 ರೈತರಿಗೆ ತಲಾ 1 ಕೋಟಿ ರೂಪಾಯಿಗಳನ ಪರಿಹಾರವಾಗಿ ನೀಡಬೇಕು ಎಂದು ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.

ಕಿಸಾನ್ ಕಾಂಗ್ರೆಸ್ ನ ಉಪಾಧ್ಯಕ್ಷ ಸುರೇಂದ್ರ ಸೋಲಂಕಿ  ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿದ್ದು, 22 ರೈತರ ಆತ್ಮಹತ್ಯೆಗೆ ಮೋದಿ ನೇತೃತ್ವದ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.

23 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿ ಅತ್ಯಂತ ಶೀತ ವಾತಾವರಣದಿಂದ ಕೂಡಿದೆ. 23 ದಿನಗಳಲ್ಲಿ 22 ಮಂದಿ ರೈತರು ಜೀವ ಕಳೆದುಕೊಂಡಿದ್ದಾರೆ, ಇದಕ್ಕೆ ಬಿಜೆಪಿಯೇ ನೇರ ಹೊಣೆ, ಎಂದು ಸೋಲಂಕಿ ಹೇಳಿದ್ದಾರೆ.

130 ಕೋಟಿ ಮಂದಿ ಇರುವ ರಾಷ್ಟ್ರದಲ್ಲಿ ಜನರ ಅಗತ್ಯತೆಗಳನ್ನು ಪೂರೈಸುವವರು ರೈತರಾಗಿದ್ದಾರೆ. ಕೃಷಿ ದೇಶದ ಜಿಡಿಪಿಗೆ ಶೇ.15 ರಷ್ಟು ಕೊಡುಗೆ ನೀಡುತ್ತದೆ.

ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ಮೃತ ರೈತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಸೋಲಂಕಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT