ಸಾಂದರ್ಭಿಕ ಚಿತ್ರ 
ದೇಶ

ಪಕ್ಷಾಂತರ ಪರ್ವ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಪಶ್ಚಿಮ ಬಂಗಾಳ ಸಚಿವ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಆಡಳಿತರೂಢ ಟಿಎಂಸಿಯ ಹಲವು ನಾಯಕರು ಬಿಜೆಪಿ ಸೇರಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಆಡಳಿತರೂಢ ಟಿಎಂಸಿಯ ಹಲವು ನಾಯಕರು ಬಿಜೆಪಿ ಸೇರಿದ್ದಾರೆ. ಇನ್ನು ಪಕ್ಷಾಂತರಿಗಳ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ ಎಂದಿರುವ ಪಶ್ಚಿಮ ಬಂಗಾಳ ಸಚಿವ ಸುಬ್ರತ ಮುಖರ್ಜಿ ಅವರು, "ದೇಶದ್ರೋಹಿಗಳು ಮತ್ತು ಬ್ಯಾಕ್‌ಸ್ಟ್ಯಾಬರ್‌ಗಳು ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದ್ದಾರೆ" ಎಂದಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಸಚಿವ, ಪಕ್ಷಾಂತರದಿಂದ ನಮ್ಮ ಪಕ್ಷ ಆಘಾತಕ್ಕೊಳಗಾಗುವುದಿಲ್ಲ. ಏಕೆಂದರೆ ಇದು ವಿಧಾನಸಭಾ ಚುನಾವಣೆಯ ಮೇಲೆ "ಯಾವುದೇ ಪರಿಣಾಮ ಬೀರುವುದಿಲ್ಲ" ಎಂದು ಹೇಳಿದ್ದಾರೆ.

ಇಂತಹ ಬೆಳವಣಿಗೆಗಳಿಗೆ ಟಿಎಂಸಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಮತ್ತು 294 ವಿಧಾನಸಭಾ ಸ್ಥಾನಗಳಲ್ಲಿ 250 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ ಬಿಜೆಪಿಯ ಹೇಳಿಕೆ "ಅಸಂಬದ್ಧ" ಎಂದಿದ್ದಾರೆ.

ನಿನ್ನೆ ಮಿಡ್ನಾಪುರದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯ ವೇಳೆ ಟಿಎಂಸಿ ಹಿರಿಯ ನಾಯಕ, ಮಾಜಿ ಸಚಿವ ಸುವೇಂದು ಅಧಿಕಾರಿ, ಟಿಎಂಸಿಯ ಒಬ್ಬ ಸಂಸದ ಮತ್ತು ಐವರು ಶಾಸಕರು ಬಿಜೆಪಿ ಸೇರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT