ವಿಕೆ ಸಿಂಗ್ 
ದೇಶ

ರಾಜಕೀಯ ಸ್ವರೂಪದ ರೈತರ ಪ್ರತಿಭಟನೆ- ಕೇಂದ್ರ ಸಚಿವ ವಿ. ಕೆ. ಸಿಂಗ್ 

 ಕೇಂದ್ರದ ನೂತನ ಮೂರು ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ರಾಜಕೀಯ ಸ್ವರೂಪದಿಂದ ಕೂಡಿದೆ ಎಂದು ಹೇಳಿರುವ ಕೇಂದ್ರ ಸಚಿವ ವಿ. ಕೆ. ಸಿಂಗ್, ರೈತರ ಕಲ್ಯಾಣವೇ ಎನ್ ಡಿಎ ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.

ತಂಜಾವೂರ್: ಕೇಂದ್ರದ ನೂತನ ಮೂರು ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ರಾಜಕೀಯ ಸ್ವರೂಪದಿಂದ ಕೂಡಿದೆ ಎಂದು ಹೇಳಿರುವ ಕೇಂದ್ರ ಸಚಿವ ವಿ. ಕೆ. ಸಿಂಗ್, ರೈತರ ಕಲ್ಯಾಣವೇ ಎನ್ ಡಿಎ ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.

ರೈತರ ಜೊತೆಗಿನ ಸಂವಾದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಲ್ಲಿ ಏನು ಮಾಡಲಾಗಿದೆಯೋ ಅದರ ಬಗ್ಗೆ ನೈಜ ರೈತರು ಸಂತಸಗೊಂಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮತ್ತು ಇತರ ವಿಷಯಗಳ ಬಗ್ಗೆ ಆತಂಕಗಳನ್ನು ನಿವಾರಿಸಲು ಪ್ರಯತ್ನಿಸಿದ್ದು, ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಲಾಭವಾಗುವುದನ್ನು ಖಚಿತಪಡಿಸಿರುವುದಾಗಿ ಹೇಳಿದ ವಿಕೆ ಸಿಂಗ್, ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆ ರೈತರಿಗಿಂತ ಹೆಚ್ಚಾಗಿ ರಾಜಕೀಯ ಸ್ವರೂಪದ್ದಾಗಿದೆ ಎಂದರು.

ಕಾಂಗ್ರೆಸ್, ಎಎಪಿ, ಎನ್ ಸಿಪಿ ಸೇರಿದಂತೆ ಬಹುತೇಕ ಪಕ್ಷಗಳು ಎಪಿಎಂಸಿ ಕಾಯ್ದೆಯಿಂದ ರೈತರನ್ನು ಮುಕ್ತಗೊಳಿಸಲು ಬಯಸಿದ್ದವು, ಮೋದಿ ಸರ್ಕಾರ ವಿಮೆ, ಮಣ್ಣು ಕಾರ್ಡ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ರೈತರ ಕಲ್ಯಾಣಕ್ಕಾಗಿ ಜಾರಿಗೆ ತಂದಿದೆ ಎಂದು ವಿಕೆ ಸಿಂಗ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT