ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ (ಸಂಗ್ರಹ ಚಿತ್ರ) 
ದೇಶ

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಆರೋಗ್ಯ ಕ್ಷೀಣ; ಶೇ.25ರಷ್ಟು ಮಾತ್ರ ಕಿಡ್ನಿ ಕಾರ್ಯ ನಿರ್ವಹಣೆ

ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ಕಿಡ್ನಿಯ ಶೇ.25ರಷ್ಟು ಭಾಗ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ಲಾಲು ಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಅವರ ಪುತ್ರ ಮಾಹಿತಿ ನೀಡಿದ್ದು, ಬಿಹಾರದ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯ  ನಿರ್ವಹಿಸುತ್ತಿವೆ. ಅವರು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣೆಯಲ್ಲಿ ಕಾರ್ಯನಿರತನಾಗಿದ್ದ ನಾನು ಕಳೆದ 4-5 ತಿಂಗಳಿನಿಂದ ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಚುನಾವಣೆ ಬಳಿಕ ಇದೇ  ಮೊದಲ ಬಾರಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನು ಪ್ರಸ್ತುತ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿರವಾಗಿದೆ. ತಂದೆಯವರ ಆರೋಗ್ಯದ ಕುರಿತು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗಿದೆ.  ರಿಮ್ಸ್ ವೈದ್ಯರೊಂದಿಗೆ ಮಾತ್ರವಲ್ಲದೆ ದೆಹಲಿಯ ಕೆಲವು ಪ್ರಖ್ಯಾತ ವೈದ್ಯರು ಮತ್ತು ನಮ್ಮ ಕುಟುಂಬ ವೈದ್ಯರೊಂದಿಗೆ  ಮಾತನಾಡುತ್ತಿದ್ದೇವೆ. ಮೂತ್ರಪಿಂಡಗಳ ಕಾರ್ಯನಿರ್ವಹಣೆ ಶೇ 25ಕ್ಕೆ ಕುಸಿದಿದೆ. ಇದು ಗಂಭೀರವಾದ ಪರಿಸ್ಥಿತಿ. ಹೀಗಾಗಿ ಲಾಲು ಅವರನ್ನು ಭೇಟಿ ಮಾಡಲು ವೈದ್ಯರೊಂದಿಗೆ ಮನವಿ ಮಾಡಿದ್ದೆವು ಎಂದು ತೇಜಸ್ವಿ ಹೇಳಿದ್ದಾರೆ.

ಇನ್ನು ಬಿಹಾರ ಚುನಾವಣೆಯಲ್ಲಿ ಕೆಲವೇ ಸ್ಥಾನಗಳ ಅಂತರದಲ್ಲಿ ಮಹಾಘಟ್ ಬಂದನ್ ಅಧಿಕಾರದಿಂದ ದೂರ ಉಳಿಯುವಂತಾಗಿತ್ತು. ಈ ಬೆಳವಣಿಗೆ ಬಳಿಕ ಇದೇ ಮೊದಲ ಬಾರಿಗೆ ತೇಜಸ್ವಿ ಯಾದವ್ ಅವರು ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ. 

ಇತ್ತೀಚೆಗಷ್ಟೇ ಲಾಲು ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ಲಾಲು ಪ್ರಸಾದ್ ಅವರ ಕಿಡ್ನಿಗಳು ಶೇ.25ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT