ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿರುವ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು! 
ದೇಶ

ಅಯೋಧ್ಯೆ ರಾಮ ಮಂದಿರದ ಅಂಗಳವನ್ನು ಅಲಂಕರಿಸಲಿವೆ ರಾಮಾಯಣದ ಉಲ್ಲೇಖಿತ ತ್ರೇತಾಯುಗದ ಮರಗಳು!

ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. 

ಅಯೋಧ್ಯೆ: ರಾಮಮಂದಿರ ನಿರ್ಮಾಣ ಪ್ರಾರಂಭವಾಗಿದ್ದು, ಮಂದಿರದ ಸುತ್ತಮುತ್ತಲ ಪ್ರದೇಶವನ್ನು ಅಲಂಕರಿಸುವುದದಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೀಲನಕ್ಷೆ ಸಿದ್ಧಪಡಿಸಿದೆ. 

ವಿವಿಧ ಗಿಡಗಳು ಹಾಗೂ ಮರಗಳನ್ನು ನೆಡುವುದಕ್ಕೆ ಟ್ರಸ್ಟ್ ಯೋಜನೆ ರೂಪಿಸಿದ್ದು, ರಾಮಾಯಣದಲ್ಲಿ ಉಲ್ಲೇಖಗೊಂಡಿದ್ದ ರಾಮಾಯಣದಲ್ಲಿ ಉಲ್ಲೇಖಗೊಂಡಿರುವ ತ್ರೇತಾಯುಗದ ಮರಗಳ ಪ್ರಬೇಧದ ಮರಗಳನ್ನೇ ಮಂದಿರದ ಸಂಕೀರ್ಣದಲ್ಲಿ ನೆಡಲಾಗುತ್ತದೆ. 

ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿ ರಚನೆಯಾಗಿದ್ದು 65 ಎಕರೆ ಭೂಮಿಯಲ್ಲಿ ಈ ಮರಗಳನ್ನು ಬೆಳೆಸಲಾಗುತ್ತದೆ. 

ಪೀಪಲ್, ಬರ್ಗಾದ್ (ಆಲದ ಮರ) ದೇವದಾರು, ಸೀತಾ ಅಶೋಕ, ಪಾರಿಜಾತ, ಸಾಲ್, ಮಾವಿನ ಮರ, ನಾಗಕೇಸರ, ಶ್ರೀಗಂಧದ ಮರಗಳು ರಾಮಾಯಣದಲ್ಲಿ ವಿಶೇಷವಾಗಿ ಉಲ್ಲೇಖಗೊಂಡಿದೆ. ರಾಮಮಂದಿರದ ಪ್ರದೇಶದಲ್ಲಿ ನಕ್ಷತ್ರ ವಾಟಿಕಾ ಪ್ರಮುಖ ಆಕರ್ಷಣೆಯಾಗಿರಲಿದ್ದು, ಪ್ರತಿಯೊಂದು ಮರವೂ ಒಂದೊಂದು ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾಗಿರುವ ರಾಶಿಯನ್ನು ಪ್ರತಿನಿಧಿಸುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT