ರೈತರು ಪ್ರಧಾನಿ ಮೋದಿಗೆ ರಕ್ತದಲ್ಲಿ ಬರೆದ ಪತ್ರ 
ದೇಶ

ಸರ್ಕಾರದ ಪತ್ರದಲ್ಲಿ ಹೊಸತೇನೂ ಇಲ್ಲ, ನಾವು ಮಾತುಕತೆಗೆ ಸಿದ್ಧ, ಕೇಂದ್ರ ನಿರ್ದಿಷ್ಟ ಪರಿಹಾರ ನೀಡಬೇಕು: ರೈತ ಮುಖಂಡರು

ಮುಂದಿನ ಸುತ್ತಿನ ಮಾತುಕತೆಗೆ ದಿನಾಂಕ ನಿಗದಿ ಕೋರಿ ಕೇಂದ್ರ ಸರ್ಕಾರ ಬರೆದ ಪತ್ರದಲ್ಲಿ ಹೊಸತೇನೂ ಇಲ್ಲ. ನಾವು ಮಾತುಕತೆಗೆ ಯಾವಾಗಲೂ ಸಿದ್ಧರಿದ್ದೇವೆ. ಆದರೆ ಸರ್ಕಾರ ನಿರ್ದಿಷ್ಟ ಪರಿಹಾರ ನೀಡಬೇಕು..

ನವದೆಹಲಿ: ಮುಂದಿನ ಸುತ್ತಿನ ಮಾತುಕತೆಗೆ ದಿನಾಂಕ ನಿಗದಿ ಕೋರಿ ಕೇಂದ್ರ ಸರ್ಕಾರ ಬರೆದ ಪತ್ರದಲ್ಲಿ ಹೊಸತೇನೂ ಇಲ್ಲ. ನಾವು ಮಾತುಕತೆಗೆ ಯಾವಾಗಲೂ ಸಿದ್ಧರಿದ್ದೇವೆ. ಆದರೆ ಸರ್ಕಾರ ನಿರ್ದಿಷ್ಟ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಸೋಮವಾರ ಹೇಳಿದ್ದಾರೆ.

ಹೊಸ ಕೃಷಿ ಕಾನೂನುಗಳಲ್ಲಿ ತಿದ್ದುಪಡಿ ಮಾಡುವ ಹಿಂದಿನ ಪ್ರಸ್ತಾಪದ ಬಗ್ಗೆ ಮಾತುಕತೆ ನಡೆಸಲು ಸರ್ಕಾರ ಬಯಸಿದೆ ಎಂದು ಕೇಂದ್ರ ತನ್ನ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕೈಟ್ ಅವರು ತಿಳಿಸಿದ್ದಾರೆ.

"ನಾವು ಈ ವಿಷಯದ ಬಗ್ಗೆ(ಸರ್ಕಾರದ ಪ್ರಸ್ತಾಪ) ಈ ಮುಂಚೆ ಅವರೊಂದಿಗೆ ಮಾತನಾಡಿಲ್ಲ. ಪ್ರಸ್ತುತ ನಾವು ಸರ್ಕಾರದ ಪತ್ರಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದು ಚರ್ಚಿಸುತ್ತಿದ್ದೇವೆ" ಎಂದು ಟಿಕೈಟ್ ಪಿಟಿಐಗೆ ತಿಳಿಸಿದ್ದಾರೆ.

ರೈತರೊಂದಿಗೆ ಡಿಸೆಂಬರ್ 9ರಂದು ನಿಗದಿಯಾಗಿದ್ದ 6ನೇ ಸುತ್ತಿನ ಮಾತುಕತೆ ರದ್ದಾಗಿತ್ತು. ಈಗ ಕೇಂದ್ರ ಸರ್ಕಾರ ಮತ್ತೆ ಮಾತುಕತೆಗೆ ಆಹ್ವಾನಿಸಿ 40 ರೈತ ಮುಖಂಡರಿಗೆ ಪತ್ರ ಬರೆದಿದೆ. 

ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಅವರು ರೈತರ ಮುಖಂಡರಿಗೆ ಪತ್ರ ಬರೆದಿದ್ದು, ಕೃಷಿ ಕಾನೂನುಗಳಲ್ಲಿ ತಿದ್ದುಪಡಿ ಮಾಡುವ ಪ್ರಸ್ತಾಪದ ಬಗ್ಗೆ ತಮ್ಮ ಕಾಳಜಿ ನಿರ್ದಿಷ್ಟಪಡಿಸುವಂತೆ ಮತ್ತು ಮುಂದಿನ ಸುತ್ತಿನ ಮಾತುಕತೆಗೆ ಅನುಕೂಲಕರ ದಿನಾಂಕವನ್ನು ನಿಗದಿಪಡಿಸುವಂತೆ ಕೇಳಿಕೊಂಡಿದ್ದಾರೆ.

"ಈ ಪತ್ರದಲ್ಲಿ ಹೊಸದೇನೂ ಇಲ್ಲ. ಹೊಸ ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡುವ ಸರ್ಕಾರದ ಪ್ರಸ್ತಾವನೆಯನ್ನು ನಾವು ಈಗಾಗಲೇ ತಿರಸ್ಕರಿಸಿದ್ದೇವೆ. ಪತ್ರದಲ್ಲಿ ಸರ್ಕಾರ ತನ್ನ ಪ್ರಸ್ತಾವನೆಯನ್ನು ಚರ್ಚಿಸಲು ಮತ್ತೊಂದು ಸುತ್ತಿನ ಮಾತುಕತೆಗೆ ದಿನಾಂಕ ತಿಳಿಸುವಂತೆ ಕೇಳಿದೆ ಎಂದು ಮತ್ತೊಬ್ಬ ರೈತ ಮುಖಂಡ ಅಭಿಮನ್ಯು ಕೊಹಾರ್ ಅವರು ಹೇಳಿದ್ದಾರೆ.

ನಮ್ಮ ಬೇಡಿಕೆ ಏನು ಅಂತ ಅವರಿಗೆ ಗೊತ್ತಿಲ್ಲವೇ? ಹೊಸ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂಬುದು ನಮ್ಮ ಬೇಡಿಕೆ" ಎಂದು ಅಭಿಮನ್ಯು ಕೊಹಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT