ರಜನಿಕಾಂತ್ 
ದೇಶ

ವಿವಾದಾತ್ಮಕ ಹೇಳಿಕೆ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಸಮನ್ಸ್!

ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. 

ತುತುಕೂಡಿ: ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. ವಿಚಾರಣೆಗಾಗಿ ಎರಡನೇ ಬಾರಿಗೆ ರಜನಿಕಾಂತ್ ಅವರಿಗೆ ಆಯೋಗ ಸಮನ್ಸ್ ನೀಡಿದೆ.

 2018 ರ ಮೇ ತಿಂಗಳಲ್ಲಿ ರಜನಿಕಾಂತ್  ಸಂತ್ರಸ್ತರನ್ನು ಭೇಟಿ ಮಾಡಲು ಬಂದಾಗ ಸ್ಟರ್ಲೈಟ್ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತುತುಕೂಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನಿಕಾಂತ್ ವಿನಾಯಿತಿ ಬಯಸಿದ್ದರು. ಆದಾಗ್ಯೂ, ಬರುವ ವರ್ಷದ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ.

ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ. ಸಾಕ್ಷ್ಯಧಾರದ ಮೇಲೆ ರಜನಿಕಾಂತ್  ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT