ರಜನಿಕಾಂತ್ 
ದೇಶ

ವಿವಾದಾತ್ಮಕ ಹೇಳಿಕೆ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಸಮನ್ಸ್!

ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. 

ತುತುಕೂಡಿ: ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ  ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ. ವಿಚಾರಣೆಗಾಗಿ ಎರಡನೇ ಬಾರಿಗೆ ರಜನಿಕಾಂತ್ ಅವರಿಗೆ ಆಯೋಗ ಸಮನ್ಸ್ ನೀಡಿದೆ.

 2018 ರ ಮೇ ತಿಂಗಳಲ್ಲಿ ರಜನಿಕಾಂತ್  ಸಂತ್ರಸ್ತರನ್ನು ಭೇಟಿ ಮಾಡಲು ಬಂದಾಗ ಸ್ಟರ್ಲೈಟ್ ವಿರೋಧಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತುತುಕೂಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನಿಕಾಂತ್ ವಿನಾಯಿತಿ ಬಯಸಿದ್ದರು. ಆದಾಗ್ಯೂ, ಬರುವ ವರ್ಷದ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ.

ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ. ಸಾಕ್ಷ್ಯಧಾರದ ಮೇಲೆ ರಜನಿಕಾಂತ್  ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT