ಸೇನಾ ಮುಖ್ಯಸ್ಥ ಜ.ನರವಣೆ 
ದೇಶ

ಲಡಾಕ್ ನ ಫಾರ್ವರ್ಡ್ ಪ್ರದೇಶಗಳಿಗೆ ಜ.ನರವಣೆ ಭೇಟಿ: ಪರಿಸ್ಥಿತಿ ಪರಾಮರ್ಶೆ, ಸೈನಿಕರಿಗೆ ಸ್ಥೈರ್ಯ ತುಂಬಿದ ಸೇನಾ ಮುಖ್ಯಸ್ಥ

ಚೀನಾದೊಂದಿಗೆ ಗಡಿ ಸಂಘರ್ಷ ಹೊಂದಿರುವ ಪೂರ್ವ ಲಡಾಕ್ ನ ಅತಿ ಎತ್ತರದ ಫಾರ್ವರ್ಡ್ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ, ಒಟ್ಟಾರೆ ಮಿಲಿಟರಿ ತಯಾರಿಗಳ ಪರಾಮರ್ಶೆ ನಡೆಸಿದ್ದಾರೆ.

ನವದೆಹಲಿ: ಚೀನಾದೊಂದಿಗೆ ಗಡಿ ಸಂಘರ್ಷ ಹೊಂದಿರುವ ಪೂರ್ವ ಲಡಾಕ್ ನ ಅತಿ ಎತ್ತರದ ಫಾರ್ವರ್ಡ್ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ, ಒಟ್ಟಾರೆ ಮಿಲಿಟರಿ ತಯಾರಿಗಳ ಪರಾಮರ್ಶೆ ನಡೆಸಿದ್ದಾರೆ.

ಕಳೆದ ಜೂನ್ ತಿಂಗಳಿಂದ ಪೂರ್ವ ಲಡಾಕ್ ನಲ್ಲಿ ಸೇನೆ ನಿಲುಗಡೆಯಿಂದಾಗಿ ಪರಿಸ್ಥಿತಿ ಬಿಗಡಾಯಿಸಿದ್ದು, ಲಡಾಕ್ ನ ರೆಚಿನ್ ಲಾ ಸೇರಿದಂತೆ ಫಾರ್ವರ್ಡ್ ಪ್ರದೇಶಗಳಿಗೆ ಭೇಟಿ ನೀಡಿ ಈ ಚಳಿಗಾಲದಲ್ಲಿ ಅಲ್ಲಿನ ಸೈನಿಕರ ಸ್ಥಿತಿಗತಿ, ಪ್ರದೇಶದ ಪರಿಸ್ಥಿತಿ ಬಗ್ಗೆ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪೂರ್ವ ಲಡಾಕ್ ನ ಹಲವು ಪರ್ವತ ಭಾಗಗಳಲ್ಲಿ ಶೂನ್ಯಕ್ಕಿಂತ ಕಡಿಮೆ ತಾಪಮಾನವಿದ್ದು ಯಾವುದೇ ಕ್ಷಣದಲ್ಲಿಯೂ ಯುದ್ಧವೇರ್ಪಡುವ ಸನ್ನಿವೇಶದಂತಿದೆ. ಸುಮಾರು 50 ಸಾವಿರ ಭಾರತೀಯ ಸೇನಾಪಡೆಗಳು ನಿಯೋಜನೆಗೊಂಡಿವೆ. ಚೀನಾ ಕೂಡ ಸರಿಸುಮಾರು ಅಷ್ಟೇ ಪ್ರಮಾಣದ ಸೇನೆಯನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಫೈರ್ ಅಂಡ್ ಫ್ಯುರಿ ಕಾರ್ಪ್ಸ್ ಎಂದು ಕರೆಯಲ್ಪಡುವ ಲೇಹ್ ಮೂಲದ 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ಪೂರ್ವ ಲಡಾಕ್ ನ ಸ್ಥಿತಿಗತಿ ಬಗ್ಗೆ ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಿದರು.

ಜನರಲ್ ನರವಣೆಯವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಲಡಾಕ್ ತಲುಪಿದ್ದು ಚಳಿಗಾಲದಲ್ಲಿ ಅಲ್ಲಿನ ವಾಸ್ತವ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಲು ದಿನವಿಡೀ ಇರುತ್ತಾರೆ ಎಂದು ತಿಳಿದುಬಂದಿದೆ.

ಗಡಿಯಲ್ಲಿನ ಸೈನಿಕರಿಗೆ ಮಾನಸಿಕ ಧೈರ್ಯ ತುಂಬಿದ ಜ.ನರವಣೆ ಇದೇ ಉತ್ಸಾಹದಿಂದ ಕೆಲಸ ಮುಂದುವರಿಸುವಂತೆ ಹೇಳಿ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಮುನ್ನ ಸಿಹಿ ಮತ್ತು ಕೇಕನ್ನು ಹಂಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT