ಸಿಂಘು ಗಡಿಭಾಗದಲ್ಲಿ ಮುಂದುವರಿದ ರೈತರ ಪ್ರತಿಭಟನೆ 
ದೇಶ

ರೈತ ದಿನಾಚರಣೆ: 'ಒಂದು ಹೊತ್ತಿನ ಊಟ ಬಿಟ್ಟು ನಮಗೆ ಬೆಂಬಲ ನೀಡಿ' ಎಂದ ಪ್ರತಿಭಟನಾಕಾರರು, ಚೌಧರಿ ಚರಣ್ ಸಿಂಗ್ ಗೆ ಗೌರವ ನಮನ 

ನೂತನ ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ದೆಹಲಿ ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬುಧವಾರ 26ನೇ ದಿನಕ್ಕೆ ಕಾಲಿಟ್ಟಿದೆ.

ನವದೆಹಲಿ: ನೂತನ ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ದೆಹಲಿ ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬುಧವಾರ 26ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ದೇಶಾದ್ಯಂತ ರೈತ ದಿನವನ್ನು ಆಚರಿಸಲಾಗುತ್ತಿದ್ದು, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜಯಂತಿಯ ಅಂಗವಾಗಿ ರೈತರು ಇಂದು ಒಂದು ಹೊತ್ತಿನ ಊಟವನ್ನು ಬಿಟ್ಟು ತಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕೆಂದು ಪ್ರತಿಭಟನಾ ನಿರತ ರೈತರು ಮನವಿ ಮಾಡಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿರುವ ಕಿಸಾನ್ ಘಾಟ್ ಗೆ ಭೇಟಿ ನೀಡಿದ ಹಲವು ರೈತರು ಚೌಧರಿ ಚರಣ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದರು. ಸರ್ಕಾರ ರೈತರ ಜೊತೆ ಹೊಸ ಮಾತುಕತೆಗೆ ಪ್ರಸ್ತಾಪ ಮುಂದಿಟ್ಟಿದ್ದು ಈ ನಿಟ್ಟಿನಲ್ಲಿ ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಚರ್ಚೆ ನಡೆಸಲು ರೈತರ ಸಭೆ ಇಂದು ಅಪರಾಹ್ನ ನಡೆಯಲಿದೆ.

ಕಳೆದ ಭಾನುವಾರ ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಮಾರು 40 ರೈತ ಒಕ್ಕೂಟಗಳ ನಾಯಕರಿಗೆ ಪತ್ರ ಬರೆದು, ಸರ್ಕಾರದ ಈ ಹಿಂದಿನ ಮಸೂದೆ ತಿದ್ದುಪಡಿ ಕುರಿತು ತಮಗೆ ಏನು ಕಳವಳವಿದೆ, ಅಸಮಾಧಾನಗಳಿವೆ ಎಂದು ತಿಳಿಸುವಂತೆ ಹಾಗೂ ಮುಂದಿನ ಸುತ್ತಿನ ಮಾತುಕತೆಗೆ ಅನುಕೂಲಕರ ದಿನಾಂಕವನ್ನು ನಿಗದಿಪಡಿಸುವಂತೆ ಸೂಚಿಸಿದ್ದರು.

ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಪ್ರತಿಭಟನಾ ನಿರತ ರೈತ ಸಂಘಟನೆಗಳು ಸದ್ಯದಲ್ಲಿಯೇ ತಮ್ಮ ಆಂತರಿಕ ಚರ್ಚೆಗಳನ್ನು ಮುಗಿಸಿ ಸರ್ಕಾರದೊಂದಿಗೆ ಮಾತುಕತೆಗೆ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ರೈತ ಸಂಘಟನೆಗಳು ಇಂದಿನಿಂದ ನಾಡಿದ್ದು ಶನಿವಾರದವರೆಗೆ ಶಹೀದಿ ದಿವಸವನ್ನು ಆಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT