ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿ 
ದೇಶ

ಸಿಸ್ಟರ್ ಅಭಯಾ ಕೊಲೆ ಪ್ರಕರಣ: ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿಗೆ ಜೀವಾವಧಿ ಶಿಕ್ಷೆ 

ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. 

ತಿರುವನಂತಪುರ: ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. 

1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್‌ನ ಬಾವಿಯಲ್ಲಿ 19 ವರ್ಷ ವಯಸ್ಸಿನ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

ಆದರೆ ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿದ್ದರು.

ನಂತರ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್‌ ಪೊಲೀಸರು ಕೂಡಾ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಷರಾ ಹಾಕಿದರು. 1993 ಮಾರ್ಚ್ 29ಕ್ಕೆ ತನಿಖೆಯನ್ನು ಸಿಬಿಐ ವಹಿಸಿಕೊಂಡಿತು.

ಪ್ರಕರಣ ಸಂಬಂಧ ಫಾದರ್ ಥಾಮಸ್ ಎಂ.ಕೊಟ್ಟೂರ್( ಆರೋಪಿ 1), ಫಾದರ್ ಜೋಸ್ ಪೂತೃಕ್ಕಯಿಲ್, ಸಿಸ್ಟರ್ ಸೆಫಿ ಬಂಧಿಸಲಾಗಿತ್ತು. ಆದರೆ, ಎಲ್ಲರಿಗೂ ಜಾಮೀನು ಸಿಕ್ಕಿತ್ತು, 2018ರಲ್ಲಿ ಫಾದರ್ ಜೋಸ್ ಪೂತೃಕ್ಕಯಿಲ್ ಪ್ರಕರಣದಿಂದ ಖುಲಾಸೆಗೊಂಡಿದ್ದರು.

1992ರ ಮಾರ್ಚ್ 27ರಂದು ಕಾನ್ವೆಂಟ್ ರೂಮೊಂದರಲ್ಲಿ ಸಿಸ್ಟರ್ ಸೆಫಿ ಹಾಗೂ ಥಾಮಸ್ ಎಂ.ಕೊಟ್ಟೂರ್ ಇಬ್ಬರ ನಡುವೆ ನಿಕಟ ಸಂಪರ್ಕವಿದ್ದುದ್ದನ್ನು ಅಕಸ್ಮಿಕವಾಗಿ ಅಭಯಾ ನೋಡಿದ್ದಾರೆ. ನಂತರ ಕೊಟ್ಟೂರ್, ಜೋಸ್ ಹಾಗೂ ಸೆಫಿ ಸೇರಿಕೊಂಡು ಅಭಯಾರನ್ನು ಕೊಚ್ಚಿ ಕೊಂದು, ಬಾವಿಗೆ ಎಸೆದಿದ್ದರು ಎಂದು ಸಿಬಿಐ ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿತ್ತು. ಈ ಪ್ರಕರಣ ಕೇರಳ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. 

ಪ್ರಕರಣ ಸಂಬಂಧ ನಿನ್ನೆಯಷ್ಟೇ ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರು ದೋಷಿಗಳೆಂದು ಹೇಳಿತ್ತು. ಇದೀಗ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT