ಉದ್ಧವ್ ಠಾಕ್ರೆ 
ದೇಶ

ಮರಾಠರಿಗೆ ಇಡಬ್ಲ್ಯೂಎಸ್ ಮೀಸಲಾತಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

ಮರಾಠರಿಗೆ ಶೈಕ್ಷಣಿಕ ಪ್ರವೇಶ ಮತ್ತು ಉದ್ಯೋಗಗಳಿಗಾಗಿ ಆರ್ಥಿಕ ದುರ್ಬಲ ವಿಭಾಗಗಳ(ಇಡಬ್ಲ್ಯೂಎಸ್) ಅಡಿಯಲ್ಲಿ ಮೀಸಲಾತಿ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.

ಮುಂಬೈ: ಮರಾಠರಿಗೆ ಶೈಕ್ಷಣಿಕ ಪ್ರವೇಶ ಮತ್ತು ಉದ್ಯೋಗಗಳಿಗಾಗಿ ಆರ್ಥಿಕ ದುರ್ಬಲ ವಿಭಾಗಗಳ(ಇಡಬ್ಲ್ಯೂಎಸ್) ಅಡಿಯಲ್ಲಿ ಮೀಸಲಾತಿ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.

ಯಾವುದೇ ಸಾಮಾಜಿಕ ಮೀಸಲಾತಿಗೆ ಒಳಪಡದವರಿಗೆ ಶೇಕಡಾ 10ರಷ್ಟು ಇಡಬ್ಲ್ಯೂಎಸ್ ಕೋಟಾವನ್ನು ಮಹಾರಾಷ್ಟ್ರ ಸರ್ಕಾರ ನಿಗದಿಪಡಿಸಿದೆ.

ವಿಶೇಷವೆಂದರೆ, ಎಸ್‌ಇಬಿಸಿ (ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ವರ್ಷ ಜನವರಿ 25ಕ್ಕೆ ವಿಚಾರಣೆ ನಡೆಯಲಿದೆ.

ಇದೇ ವೇಳೆ, ರಾಜ್ಯದ ಪ್ರಾಚೀನ ದೇವಾಲಯಗಳ ಸಂರಕ್ಷಣೆಯ ಯೋಜನೆಗೆ ರಾಜ್ಯ ಸಚಿವ ಸಂಪು
ಅನುಮೋದನೆಯನ್ನು ನೀಡಿದ್ದು, ರಾಜ್ಯ ಪಿಡಬ್ಲ್ಯುಡಿ ಇಲಾಖೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT