ಕಳೆದ ರಾತ್ರಿ ಎನ್ ಸಿಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕರು 
ದೇಶ

ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು 'ಕೈ' ಬಿಟ್ಟು ಎನ್ ಸಿಪಿ ಸೇರ್ಪಡೆ!

ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.

ಮುಂಬೈ: ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.

ಮಹಾರಾಷ್ಟ್ರದ ಬಿವಂಡಿ ನಿಝಂಪುರ್ ಮುನ್ಸಿಪಲ್ ಕಾರ್ಪೊರೇಶನ್ ನ 18 ಕಾಂಗ್ರೆಸ್ ಕಾರ್ಪೊರೇಟರ್ ಗಳು ನಿನ್ನೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಸೇರಿದ್ದಾರೆ. ಅವರಲ್ಲಿ ಉಪ ಮೇಯರ್ ಇಮ್ರಾನ್ ಆಲಿ ಮೊಹಮ್ಮದ್ ಖಾನ್ ಕೂಡ ಸೇರಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡರು.

ಮಹಾರಾಷ್ಟ್ರ ಸರ್ಕಾರದಲ್ಲಿ ಮೈತ್ರಿಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಎನ್ ಸಿಪಿ ಮಧ್ಯೆ ನಿನ್ನೆ ಕಾಂಗ್ರೆಸ್ ನಾಯಕರು ಎನ್ ಸಿಪಿಗೆ ಸೇರ್ಪಡೆಗೊಂಡಿದ್ದು ರಾಜಕೀಯವಾಗಿ ಕಾಂಗ್ರೆಸ್ ಗೆ ಭಾರೀ ಮುಖಭಂಗ ಎನ್ನಬಹುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT