27ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ 
ದೇಶ

ಮುಕ್ತ ಮಾತುಕತೆಗೆ ಸಿದ್ಧ, ದಿನಾಂಕ ಮತ್ತು ಸಮಯ ನಿಗದಿ ಮಾಡಿ: ರೈತರಿಗೆ ಕೇಂದ್ರ ಮನವಿ

ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು,...

ಚಂಡೀಗಢ: ಮಾತುಕತೆಗೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆ ರೈತ ಸಂಘಗಳು ಕೇಳಿದ ಮಾರನೇ ದಿನವೇ ಕೇಂದ್ರ ಸರ್ಕಾರ ತಾನು, ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು, ಅದಕ್ಕೆ ನೀವೇ ದಿನಾಂಕ ಮತ್ತು ಸಮಯ ನಿಗದಿಪಡಿಸುವಂತೆ ಗುರುವಾರ ಚೆಂಡನ್ನು ರೈತರ ಅಂಗಳಕ್ಕೆ ಎಸೆದಿದೆ.

ಈ ಸಂಬಂಧ ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಅವರು 40 ರೈತ ಸಂಘಟನೆಗಳಿಗೆ ಪತ್ರ ಬರೆದಿದ್ದು, ನೀವು ಚರ್ಚಿಸಲು ಬಯಸುವ ಸಮಸ್ಯೆಗಳ ಬಗ್ಗೆ ವಿವರ ನೀಡುವಂತೆ ಕೇಳಿಕೊಂಡಿದ್ದಾರೆ.

ಸರ್ಕಾರ ಸ್ಪಷ್ಟ ಉದ್ದೇಶ ಮತ್ತು ಮುಕ್ತ ಮನಸ್ಸಿನಿಂದ ಪ್ರತಿಭಟನೆಯನ್ನು ಅಂತ್ಯಗೊಳಿಸಲು ನಿಮ್ಮೊಂದಿಗೆ ಮತ್ತೆ ಮಾತುಕತೆ ನಡೆಸಲು ಸಿದ್ಧವಿದೆ. ಮಾತುಕತೆಯ ದಿನಾಂಕ ಮತ್ತು ಸಮಯವನ್ನು ತಿಳಿಸುವಂತೆ ಅಗರ್ವಾಲ್ ಅವರು ರೈತ ಮುಖಂಡರಿಗೆ ಮನವಿ ಮಾಡಿದ್ದಾರೆ.

ಸರ್ಕಾರ ಪ್ರತಿಭಟನಾನಿರತ ರೈತ ಸಂಘಟನೆಗಳು ಎತ್ತಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT