ವಿಶ್ವ ಭಾರತಿ ಶತಮಾನೋತ್ಸವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

'ಭಾರತದ ಸ್ವಾತಂತ್ರ್ಯ ಸಂಗ್ರಾಮ ಭಕ್ತಿ ಚಳವಳಿಯ ಬೇರುಗಳನ್ನು ಹೊಂದಿದೆ': ವಿಶ್ವ ಭಾರತಿ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ 

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬೇರು ಭಕ್ತಿ ಚಳವಳಿಯಲ್ಲಿದೆ. ನೂರಾರು ವರ್ಷಗಳ ಭಕ್ತಿ ಚಳವಳಿಯ ಜೊತೆಗೆ ಕರ್ಮ ಚಳವಳಿ ಕೂಡ ಈ ದೇಶದಲ್ಲಿ ನಡೆಯಿತು. ಭಾರತೀಯರು ಹಲವಾರು ವರ್ಷಗಳವರೆಗೆ ಗುಲಾಮಗಿರಿ ಮತ್ತು ಸಾಮ್ರಾಜ್ಯಶಾಹಿ ವಿರುದ್ಧ ಹೋರಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬೇರು ಭಕ್ತಿ ಚಳವಳಿಯಲ್ಲಿದೆ. ನೂರಾರು ವರ್ಷಗಳ ಭಕ್ತಿ ಚಳವಳಿಯ ಜೊತೆಗೆ ಕರ್ಮ ಚಳವಳಿ ಕೂಡ ಈ ದೇಶದಲ್ಲಿ ನಡೆಯಿತು. ಭಾರತೀಯರು ಹಲವಾರು ವರ್ಷಗಳವರೆಗೆ ಗುಲಾಮಗಿರಿ ಮತ್ತು ಸಾಮ್ರಾಜ್ಯಶಾಹಿ ವಿರುದ್ಧ ಹೋರಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ವಿಶ್ವ ಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ, ವಿಶ್ವ ಭಾರತಿ ವಿಶ್ವ ವಿದ್ಯಾಲಯ ಗುರು ರವೀಂದ್ರ ನಾಥ ಠಾಗೋರ್ ರ ತತ್ವಶಾಸ್ತ್ರ, ದೂರದೃಷ್ಟಿ ಮತ್ತು ಕಠಿಣ ಪರಿಶ್ರಮದ ಸಮ್ಮಿಶ್ರವಾಗಿದೆ. ದೇಶಕ್ಕೆ ನಿರಂತರ ಶಕ್ತಿ ತುಂಬುವ ಕೇಂದ್ರವಾಗಿದೆ ಎಂದು ಶ್ಲಾಘಿಸಿದರು.

ಈ ವಿಶ್ವವಿದ್ಯಾಲಯ ಸ್ಥಾಪನೆಯ ಹಿಂದಿನ ಪರಿಸ್ಥಿತಿಯನ್ನು ನಾವು ನೆನಪು ಮಾಡಿಕೊಂಡರೆ, ಕೇವಲ ಬ್ರಿಟಿಷ್ ಆಡಳಿತ ಮಾತ್ರವಲ್ಲದೆ ನಮ್ಮ ದೇಶದ ಸಂಪದ್ಭರಿತ ಅಭಿಪ್ರಾಯ, ನೂರಾರು ವರ್ಷಗಳ ಇತಿಹಾಸ ಇದರ ಸ್ಥಾಪನೆಗೆ ನೆರವಾಯಿತು. ಗುರುದೇವ ರವೀಂದ್ರ ನಾಥ ಠಾಕೋರರ ಮಾರ್ಗದರ್ಶನದಲ್ಲಿ ವಿಶ್ವ ಭಾರತಿ ವಿ.ವಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ವೇಳೆ ಭಾರತೀಯರ ಮನೋಧರ್ಮವನ್ನು ಬಲವಾಗಿ ಅಚ್ಚಳಿಯದಂತೆ ಮುದ್ರೆಯೊತ್ತಿದೆ. ಭಾರತದ ಧಾರ್ಮಿಕ ಪ್ರಜ್ಞಾವಂತಿಕೆ ಇಡೀ ಮನುಕುಲಕ್ಕೆ ಅದರ ಪ್ರಯೋಜನ ಸಿಗುವಂತಾಗಲು ಗುರುದೇವ ಬಯಸಿದ್ದರು. ಆತ್ಮನಿರ್ಭರ ಭಾರತ ದೃಷ್ಟಿಕೋನ ಸಹ ಈ ಮನೋಧರ್ಮದಿಂದ ಎಳೆ ತೆಗೆದುಕೊಳ್ಳಲಾಗಿದೆ ಎಂದರು.

ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಈಡೇರಿಸಲು ಸರಿಯಾದ ಮಾರ್ಗದಲ್ಲಿ ನಡೆಯುವ ಬಹುದೊಡ್ಡ ಏಕೈಕ ದೇಶ ಭಾರತವಾಗಿದೆ ಎಂದು ಸಹ ಮೋದಿ ಇದೇ ಸಂದರ್ಭದಲ್ಲಿ ಹೇಳಿದರು.

1921ರಲ್ಲಿ ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಗುರುದೇವ ರವೀಂದ್ರನಾಥ ಠಾಗೋರ್ ರು ಸ್ಥಾಪಿಸಿದ ವಿಶ್ವ ಭಾರತಿ ವಿಶ್ವ ವಿದ್ಯಾಲಯ ದೇಶದ ಹಳೆ ವಿಶ್ವವಿದ್ಯಾಲಯಗಳಲ್ಲಿ ಒಂದು. 1951ರ ಮೇ ತಿಂಗಳಲ್ಲಿ ವಿಶ್ವ ಭಾರತಿ ವಿಶ್ವ ವಿದ್ಯಾಲಯವನ್ನು ಕೇಂದ್ರೀಯ ವಿ.ವಿ ಎಂದು ಮತ್ತು ರಾಷ್ಟ್ರದ ಮುಖ್ಯ ಸಂಸ್ಥೆಯೆಂದು ಘೋಷಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT