ಶ್ರೀನಗರ: ಡಿಡಿಸಿ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಕೆಲವು ಪಕ್ಷಗಳು ಹಣ ಬಲ ಮತ್ತು ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್-ಐ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)ಸದಸ್ಯ ಯಸ್ಮೀನಾ ಜಾನ್ ಅವರು ಈ ಹಿಂದೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷ ನೇತೃತ್ವದ ಮಾಜಿ ಹಣಕಾಸು ಸಚಿವ ಅಲ್ತಾಫ್ ಬುಖಾರಿ ಘೋಷಿಸಿದ ನಂತರ ಒಮರ್ ಈ ಹೇಳಿಕೆ ನೀಡಿದ್ದಾರೆ.
ಯಾಸ್ಮಿನಾ ಜಾನ್ ಅವರು ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಪಕ್ಷದ ಮೂಲಕ ಜನವರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು ಎಂದು ಹೇಳಿದ್ದಾರೆ.
ಶೋಪಿಯಾನ್ ಜಿಲ್ಲೆಯ ನಮ್ಮ ನಾಯಕರನ್ನು ಪೊಲೀಸರು ಏತಕ್ಕಾಗಿ ಬಂಧನಕ್ಕೆ ಒಳಪಡಿಸುತ್ತಿದ್ದಾರೆ ಎಂಬುದನ್ನು ಇದು ವಿವರಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಆಡಳಿತವು ಕುದುರೆ ವ್ಯಾಪಾರ ಮತ್ತು ಪಕ್ಷಾಂತರಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ಎನ್ಸಿಯಲ್ಲಿ ಚುನಾವಣೆಯಲ್ಲಿ ಗೆದ್ದವರು ಎಂದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಒಮರ್ ಟ್ವಿಟ್ಟರ್ನಲ್ಲಿ ಹೇಳಿದರು.
ಆಡಳಿತವು ಪಕ್ಷಪಾತದ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಎನ್ಸಿ ಉಪಾಧ್ಯಕ್ಷರು ಹೇಳಿದರು.