ಬಿಜೆಪಿ ಸೇರಿದ ಅರುಣಾಚಲಂ 
ದೇಶ

ಕಮಲ್ ಹಾಸನ್ ಗೆ ಬಿಗ್ ಶಾಕ್: ಪಕ್ಷ ತೊರೆದು ಬಿಜೆಪಿ ಸೇರಿದ ಎಂಎನ್ಎಂ ಪ್ರಧಾನ ಕಾರ್ಯದರ್ಶಿ

ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯ್ಯುಮ್ (ಎಂಎನ್‌ಎಂ) ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಭಾರೀ ಶಾಕ್ ನೀಡಿದ್ದಾರೆ.

ಚೆನ್ನೈ: ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯ್ಯುಮ್ (ಎಂಎನ್‌ಎಂ) ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಭಾರೀ ಶಾಕ್ ನೀಡಿದ್ದಾರೆ.

ಕೇಂದ್ರದ ಮೂರು ನೂತನ ಕೃಷ ಕಾನೂನುಗಳನ್ನು ಬೆಂಬಲಿಸಿ ಅರುಣಾಚಲಂ  ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಅರುಣಾಚಲಂ ಅವರು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು.

ಕೇಂದ್ರದ ಕೃಷಿ ಕಾನೂನನ್ನುಬೆಂಬಲಿಸಲು ಕಮಲ್ ನಿರಾಕರಿಸಿದ ನಂತರ ತಾವು ಬಿಜೆಪಿಗೆ ಸೇರಿಕೊಂಡಿದ್ದಾಗಿ ಅರುಣಾಚಲಂ ಸುದ್ದಿಗಾರರಿಗೆ ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರೈತರಿಗೆ ಅನುಕೂಲವಾಗುವಂತಹ ದೀರ್ಘಾವಧಿ ದೃಷ್ಟಿಯಿಂದ ಈ ಮೂರು ಕಾನೂನುಗಳನ್ನು ರೂಪಿಸಿದ್ದಾರೆ, ನಾನು ಸಹ ರೈತ ಕುಟುಂಬದಿಂದ ಬಂದಿದ್ದರಿಂದ, ಅವುಗಳ ಪ್ರಯೋಜನಗಳನ್ನು ನಾನು ತಿಳಿದಿದ್ದೇನೆ' ಎಂದು ಹೇಳಿದರು.

"ಕೇಂದ್ರದ ನಿರ್ಧಾರವನ್ನು ಬೆಂಬಲಿಸುವಂತೆ ನನ್ನ ನಾಯಕ (ಕಮಲ್) ಮತ್ತು ಎಂಎನ್‌ಎಂ ನಾಯಕರನ್ನು ನಾನು ಕೇಳಿದಾಗ ಅವರು ನಿರಾಕರಿಸಿದರು. ನಾನಿದನ್ನು ಬಿಜೆಪಿಯ ಕಾನೂನು ಎಂದು ಪರಿಗಣಿಸಬೇಡಿ ಎಂದು ಹೇಳಿದೆ. ಕೇಂದ್ರ ಸರ್ಕಾರವು ದೀರ್ಘಾವಧಿಯಲ್ಲಿ ರೈತರ ಅನುಕೂಲಕ್ಕಾಗಿ ಈ ಕಾನೂನು ತಂದಿದ್ದಾಗಿ ನಾನು ಹೇಳಿದೆ. ನಾನು ಮನವರಿಕೆ ಮಾಡಲು ಪ್ರಯತ್ನಿಸಿದರೂ ಯಶಸ್ವಿಯಾಗಿಲ್ಲ. ನನಗೆ ಬೇರೆ ಮಾರ್ಗವಿಲ್ಲದ ಕಾರಣ ಪಕ್ಷವನ್ನು ತೊರೆದಿದ್ದೇನೆ" ಅವರು ಹೇಳಿದ್ದಾರೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೇರುತ್ತಿರುವುದು ಸಂತಸ ತಂದಿದೆ ಎಂದು ಅರುಣಾಚಲಂ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT