ಅಟಲ್ ಸಮಾದಿಗೆ ತೆರಳಿ ಗೌರವ ಶ್ರದ್ಧಾಂಜಲಿ 
ದೇಶ

ಮಾಜಿ ಪ್ರಧಾನ ಮಂತ್ರಿ ದಿ.ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 96ನೇ ಜಯಂತಿ ಇಂದು. ಈ ಸಂದರ್ಭದಲ್ಲಿ ಹಲವು ನಾಯಕರು ಅವರನ್ನು ಸ್ಮರಿಸಿದ್ದಾರೆ.

ನವದೆಹಲಿ: ಇಂದು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವೆಂದು ಆಚರಿಸಲಾಗುತ್ತಿದೆ. 

ದೆಹಲಿಯಲ್ಲಿರುವ ಅಟಲ್ ಸಮಾದಿ ಸದೈವ್ ಅಟಲ್ ಬಳಿ ಬೆಳಗ್ಗೆಯೇ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಷ್ಪವಿರಿಸಿ ಗೌರವ ನಮನ ಸಲ್ಲಿಸಿದರು.

ಸದೈವ್ ಅಟಲ್ ಗೆ ತೆರಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಪಿಯೂಷ್ ಗೋಯಲ್ ಅಗಲಿದ ನಾಯಕನನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.

ಪ್ರಧಾನ ಮಂತ್ರಿ ತಮ್ಮ ಸಂದೇಶದಲ್ಲಿ, ಅಟಲ್ ಬಿಹಾರಿ ವಾಜಪೇಯಿಯವರ 96ನೇ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ನಮನಗಳು. ಅಟಲ್ ಜೀಯವರು ದೇಶವನ್ನು ಅಭೂತಪೂರ್ವ ಯಶಸ್ಸಿನೆಡೆಗೆ ಕೊಂಡೊಯ್ದಿದ್ದರು. ಬಲಿಷ್ಠ ಮತ್ತು ಸಂಪದ್ಭರಿತ ದೇಶವನ್ನು ಕಟ್ಟುವಲ್ಲಿನ ಅವರ ಪ್ರಯತ್ನವನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಇಂದು ಪ್ರಧಾನ ಮಂತ್ರಿಗಳು ವಾಜಪೇಯಿ ಅವರ ಕುರಿತ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ನಂತರ ಕಿಸಾನ್ ಸಮ್ಮಾನ್ ನಿಧಿ-ಪಿಎಂ ಕಿಸಾನ್ ಅಡಿಯಲ್ಲಿ ಆರ್ಥಿಕ ನೆರವಿನ ಕಂತನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಅಟಲ್ ಜೀಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಾಯಕರು ಅವರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಆರೋಗ್ಯ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!