ಸ್ಮೃತಿ ಇರಾನಿ 
ದೇಶ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಮೂವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಶೂಟರ್ ವರ್ತಿಕಾ ಸಿಂಗ್

ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇನ್ನಿಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ: ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ಮಾಡಲು ಹಣಕ್ಕಾಗಿ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಇನ್ನಿಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಸದ-ಶಾಸಕರ ಕೋರ್ಟ್ ವಿಚಾರಣೆಗೆ ಜನವರಿ 2ಕ್ಕೆ ನಿಗದಿಪಡಿಸಿದ್ದು ಪ್ರಕರಣವು ತನ್ನ ವ್ಯಾಪ್ತಿಗೆ ಒಳಪಡುತ್ತದೆಯೇ ಎಂದು ನಿರ್ಧರಿಸುತ್ತದೆ ಎಂದು ವರ್ತಿಕಾ ಸಿಂಗ್ ವಕೀಲರು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಆಪ್ತರು ವರ್ತಿಕಾ ಸಿಂಗ್ ಗೆ ನಕಲಿ ಪತ್ರವೊಂದನ್ನು ನೀಡಿದ್ದು ಅದರಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎಂದು ಶೂಟರ್ ಆರೋಪಿಸಿದ್ದಾರೆ.

ಕೇಂದ್ರ ಸಚಿವರ ಇಬ್ಬರು ಸಹಾಯಕರಾದ ವಿಜಯ್ ಗುಪ್ತಾ ಮತ್ತು ರಜನೀಶ್ ಸಿಂಗ್ ಅವರು ಮೊದಲಿಗೆ 1 ಕೋಟಿ ರೂ. ಬೇಡಿಕೆ ಇಟ್ಟರು ಮತ್ತು ನಂತರ ಅದನ್ನು 25 ಲಕ್ಷ ರೂ.ಗೆ ಇಳಿಸಿದರು ಎಂದು ವರ್ತಿಕಾ ಸಿಂಗ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT