ಸುವೇಂದು ಅಧಿಕಾರಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ದೆ ಮಾಡುವುದು: ಸುವೆಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ಬಳಿಕವಷ್ಟೇ ತಾವು ನಿದ್ರೆ ಮಾಡುವುದಾಗಿ  ತೃಣಮೂಲ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಶಾಸಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಕಾಂತಿ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ಬಳಿಕವಷ್ಟೇ ತಾವು ನಿದ್ರೆ ಮಾಡುವುದಾಗಿ  ತೃಣಮೂಲ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಶಾಸಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಬಿಜೆಪಿ ಸೇರ್ಪಡೆಗೊಳ್ಳಲು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ. ಇದಕ್ಕೆ ಜನರ ಅನುಮೋದನೆ ದೊರಕಿದೆ ಎಂದು ಪ್ರತಿಕ್ರಿಯಿಸಿದರು. ತವರೂರು ಕಾಂತಿಯಲ್ಲಿ ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಸುವೆಂದು ಅಧಿಕಾರಿ, ಈ ರೋಡ್‌ ಶೋಗಳು ನಾನು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. 

ನನ್ನ ನಿರ್ಧಾರಕ್ಕೆ ಜನರ ಅನುಮೋದನೆ ದೊರಕಿದೆ ಎಂದು ಹೇಳಿದರು.ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಮಾನವಾಗಿ, ಜನವರಿ 8ರಂದು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ.

ನಂದಿಗ್ರಾಮಕ್ಕೆ ಜನವರಿ 7ರಂದು ಮಮತಾ ಬ್ಯಾನರ್ಜಿ ಅವರನ್ನು ನಾನು ಸ್ವಾಗತಿಸುತ್ತೇನೆ. ಅವರು ಅಲ್ಲಿ ಏನನ್ನು ಹೇಳುತ್ತಾರೆ ಅವೆಲ್ಲದಕ್ಕೂ ಮರುದಿನ ನಾನು ಪ್ರತ್ಯುತ್ತರ ನೀಡಲಿದ್ದೇನೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT