ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಹೊತ್ತಿ ಉರಿದ ಮನೆ, ಮೂವರು ಮಕ್ಕಳು ಸೇರಿ ನಾಲ್ವರು ಸಜೀವ ದಹನ

ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಾಂಡಾ: ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸಂಗೀತ ಯಾದವ್(28) ಅವರ ಮನೆಯಿಂದ ಹೊಗೆ ಹೊರಬರುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಸಂಗೀತ ಯಾದವ್ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಸಜೀವ ದಹನವಾಗಿದ್ದಾರೆ ಎಂದು ಎಎಸ್ ಪಿ ಮಹೇಂದ್ರ ಪ್ರತಾಪ್ ಸಿಂಗ್ ಚೌಹಾನ್ ಅವರು ಹೇಳಿದ್ದಾರೆ.

ಬೆಂಕಿ ಆಕಸ್ಮಿಕಕ್ಕೆ ತಕ್ಷಣ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಎಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?