ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 
ದೇಶ

ಪ್ರತಿಭಟನಾನಿರತ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸಲಿ: ರಾಹುಲ್ ಗಾಂಧಿ

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸುವಂತೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ನವದೆಹಲಿ: ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸುವಂತೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನಾನಿರತ ರೈತರ ಸಮಸ್ಯೆಯನ್ನು ಆಲಿಸುವಂತೆ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್ ಮತ್ತು ಅಧೀರ್ ರಂಜನ್ ಚೌಧರಿ ಡಿಸೆಂಬರ್ 24ರಂದು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ 2 ಕೋಟಿ ಸಹಿ ಸಂಗ್ರಹದ ಮನವಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದರು. 

ರೈತ ವಿರೋಧಿ ಕಾನೂನುಗಳ ವಿರುದ್ಧ ರೈತರು ಸಿಡಿದೆದ್ದಿರುವುದನ್ನು ಇಡೀ ದೇಶ ನೋಡುತ್ತಿರುವುದಾಗಿ ರಾಷ್ಟ್ರಪತಿಗೆ ಹೇಳಿದ್ದಾಗಿ ರಾಹುಲ್ ಗಾಂಧಿ ಹೇಳಿದ್ದರು.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿಯಲ್ಲಿ ನವೆಂಬರ್ 26ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

ರಾಜ್ಯ ಸರ್ಕಾರ ರಾಜಕೀಯ ಪಂಚಾಯಿತಿ ಮಾಡುವ ರೀತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿದೆ: ಸಂಸದ ಬೊಮ್ಮಾಯಿ

ಚಲಿಸುತ್ತಿರುವ ರೈಲಿನಲ್ಲಿ 'ಅಪಾಯಕಾರಿ ಸ್ಟಂಟ್' ಮೂಲಕ ಯುವತಿ ಮುಟ್ಟಲು ಯತ್ನಿಸಿದ ಬಿಹಾರದ ಯುವಕ! Video

Pakistan: ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಸ್ಫೋಟ, ಓರ್ವ ಸಾವು, ಹಲವು ಮಂದಿಗೆ ಗಾಯ! Video

SCROLL FOR NEXT