ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವ ಪೊಲೀಸರು 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ನರ್ವಾಲ್; ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಕಾರೊಂದರಲ್ಲಿ ರಯೀಜ್ ಅಹ್ಮದ್ ದಾರ್ ಹಾಗೂ ಸಬ್ಜರ್ ಅಹ್ಮದ್ ಶೇಖ್ ಎಂಬ ಇಬ್ಬರು ಶಂಕಿತರ ಉಗ್ರರು ತೆರಳುತ್ತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. 

ಈ ವೇಳೆ ಶಂಕಿತರಿಂದ 1 ಎಕೆ ಸಿರೀಸ್ ರೈಫಲ್, 1 ಪಿಸ್ತೂಲ್, 2 ನಿಯತಕಾಲಿಕೆಗಳು, 60 ಎಕೆ ರೈಫಲ್ನ ಗುಂಡುಗಳು, 15 ಪಿಸ್ತೂಲಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಕುರಿತು ಎಫ್‌ಐಆರ್ ನಂ. 359/20 ಯು / ಎಸ್ 120-ಬಿ / 121/121-ಎ / 122 ಐಪಿಸಿ, 7/25 ಎ ಆಕ್ಟ್, 18/20/38/39 ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ), 1967 ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT