ಕೋವಿ ಶೀಲ್ಡ್ ಲಸಿಕೆ 
ದೇಶ

ಆಕ್ಸ್‌ಫರ್ಡ್ ನ ಕೋವಿಶೀಲ್ಡ್‌ ಲಸಿಕೆಗೆ ತುರ್ತು ಬಳಕೆ ಅನುಮತಿ ಸಾಧ್ಯತೆ: ವರದಿ

ಆಕ್ಸ್ ಫರ್ಡ್ ಸಂಸ್ಥೆಯ ಕೋವಿಶೀಲ್ಡ್‌ ಕೊರೋನಾ ವೈರಸ್ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಆಕ್ಸ್ ಫರ್ಡ್ ಸಂಸ್ಥೆಯ ಕೋವಿಶೀಲ್ಡ್‌ ಕೊರೋನಾ ವೈರಸ್ ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜನವರಿಯಲ್ಲಿ ಕೋವಿಡ್-–19 ಲಸಿಕೆಯನ್ನು ವಿತರಿಸಲು ಪೂರ್ವಸಿದ್ಧತೆ ಆರಂಭವಾಗಿದ್ದು, ತುರ್ತು ಬಳಕೆಗಾಗಿ ಆಕ್ಸ್‌ಫರ್ಡ್‌ ಲಸಿಕೆಗೆ(ಕೋವಿಶೀಲ್ಡ್‌) ಮುಂದಿನ ವಾರ ಭಾರತೀಯ ಔಷಧ ನಿಯಂತ್ರಕರು (DCGI) ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ರಾಷ್ಟ್ರೀಯ  ಮಾಧ್ಯಮಗಳು ವರದಿ ಮಾಡಿದ್ದು, 'ಆಕ್ಸ್‌ಫರ್ಡ್‌ ಲಸಿಕೆಗೆ ಬ್ರಿಟನ್‌ನ ಔಷಧ ನಿಯಂತ್ರಕರು ಒಪ್ಪಿಗೆ ನೀಡಿದ ಬಳಿಕ, ಭಾರತದಲ್ಲಿರುವ ಕೋವಿಡ್‌-19 ತಜ್ಞರ ಸಮಿತಿಯು ಸಭೆ ನಡೆಸಲಿದೆ. ಭಾರತದಲ್ಲಿ ಹಾಗೂ ವಿದೇಶದಲ್ಲಿ ನಡೆದ ಲಸಿಕೆಯ ಪ್ರಯೋಗ, ಸುರಕ್ಷತೆ ಹಾಗೂ ಪರಿಣಾಮದ ಫಲಿತಾಂಶವನ್ನು  ಕೂಲಂಕುಷವಾಗಿ ಪರಿಶೀಲಿಸಿ, ಲಸಿಕೆಯ ತುರ್ತು ಬಳಕೆಗೆ ಅನುಮತಿಯ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಮೂಲಗಳ ಪ್ರಕಾರ ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡುವುದಕ್ಕೆ ಇನ್ನೂ ಕಾಲಾವಕಾಶ ಬೇಕಾಗಿದೆ. ಏಕೆಂದರೆ, ಲಸಿಕೆಯ ಮೂರನೇ ಹಂತದ ಪ್ರಯೋಗವು ಇನ್ನೂ ನಡೆಯುತ್ತಿದೆ. ಹೀಗಾಗಿ ಆಕ್ಸ್‌ಫರ್ಡ್‌ ಲಸಿಕೆ ‘ಕೋವಿಶೀಲ್ಡ್‌’  ಭಾರತದಲ್ಲಿ ಬಿಡುಗಡೆಯಾಗಲಿರುವ ಮೊದಲ ಕೋವಿಡ್‌ ಲಸಿಕೆಯಾಗಿರಲಿದೆ ಎಂದು ಹೇಳಲಾಗುತ್ತಿದೆ. 

ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ) ಸೂಚಿಸಿದ್ದ ಹೆಚ್ಚುವರಿ ದತ್ತಾಂಶಗಳನ್ನು, ಕೋವಿಶೀಲ್ಡ್‌ ಲಸಿಕೆ ತಯಾರಿಸುತ್ತಿರುವ ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ(ಎಸ್ಐಐ) ಕಳೆದ ವಾರ ನೀಡಿದೆ. ಅಲ್ಲದೆ ತುರ್ತು ಬಳಕೆಗೆ ಅನುಮತಿ ನೀಡುವಂತೆ ಕೋರಿ ಭಾರತ್‌ ಬಯೋಟೆಕ್‌, ಸೆರಂ ಇನ್‌ಸ್ಟಿಟ್ಯೂಟ್‌  ಹಾಗೂ ಫೈಝರ್‌ ಕಂಪನಿಯು ತಿಂಗಳ ಆರಂಭದಲ್ಲಿ ಡಿಸಿಜಿಐಗೆ ಅರ್ಜಿ ಸಲ್ಲಿಸಿವೆ. 

ಇನ್ನು ಈಗಾಗಲೇ ಫಿಝರ್‌ ಲಸಿಕೆ ಬಳಕೆಗೆ ಬ್ರಿಟನ್‌, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಅನುಮತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT