ಹನುಮಾನ್ ಬೆನಿವಾಲ್ 
ದೇಶ

ರೈತರ ಪ್ರತಿಭಟನೆ: ಎನ್_ಡಿಎ ಮೈತ್ರಿಕೂಟ ತ್ಯಜಿಸಿದ ಆರ್ ಎಲ್ ಪಿ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಎನ್_ಡಿಎ ಮೈತ್ರಿಕೂಟದಿಂದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ ಹೊರ ನಡೆದಿದೆ.

ಜೈಪುರ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಎನ್_ಡಿಎ ಮೈತ್ರಿಕೂಟದಿಂದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ ಹೊರ ನಡೆದಿದೆ.

ಕೇಂದ್ರ ಸರ್ಕಾರವು ರೈತರನ್ನು ನಡೆಸಿಕೊಳ್ಳುತ್ತಿರುವ ರೀತಿ ಹಾಗೂ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ಹನುಮಾನ್ ಬೆನಿವಾಲ್ ನೇತೃತ್ವದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು ಎನ್ ಡಿಎ ಮೈತ್ರಿಕೂಟವನ್ನು ತ್ಯಜಿಸಿದೆ. ಮೂಲಗಳ ಪ್ರಕಾರ ಹನುಮಾನ್ ಬೆನಿವಾಲ್ ಈಗಾಗಲೇ ಮೂರು ಸಂಸದೀಯ  ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಈ ಕುರಿತಾದಂತೆ ಎಚ್ಚರಿಕೆ ನೀಡಿದ್ದು, ಇದೀಗ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯು ಎನ್ಡಿಎ ಮೈತ್ರಿಕೂಟವನ್ನು ತ್ಯಜಿಸಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ರಾಜಸ್ಥಾನದ ನಾಗೌರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬೆನಿವಾಲ್‌, 'ರೈತರ ವಿರೋಧಿಗಳಾಗಿರುವ ಯಾರ ಜೊತೆಗೂ ನಾವು ನಿಲ್ಲುವುದಿಲ್ಲ' ಎಂದು ಘೋಷಿಸಿದ್ದಾರೆ.

2018ರಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಗೂ ಮುನ್ನ ಹನುಮಾನ್‌‌ ಬೆನಿವಾಲ್‌ ಬಿಜೆಪಿಯಿಂದ ಹೊರ ಬಂದು ರಾಷ್ಟ್ರೀಯ ಲೋಕತಾಂತ್ರಿಕ್‌ ಪಕ್ಷ ಕಟ್ಟಿದ್ದರು. ನಂತರ 2019ರಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಆದರೆ ಕೃಷಿ ಕಾಯಿದೆಯನ್ನು ವಿರೋಧಿಸುತ್ತಾ ಬಂದಿದ್ದ ಅವರು ರೈತರ  ಹೋರಾಟವನ್ನು ಬೆಂಬಲಿಸಿದ್ದರು. ಇದೀಗ ಮೈತ್ರಿಕೂಟವನ್ನೇ ತೊರೆದಿದ್ದಾರೆ. ಆರ್‌ಎಲ್‌ಪಿ, ಇತ್ತೀಚೆಗೆ ಎನ್‌ಡಿಎ ಮೈತ್ರಿಕೂಟವನ್ನು ತೊರೆದ ಮೂರನೇ ಪಕ್ಷವಾಗಿದೆ. ಶಿವಸೇನೆ ಕಳೆದ ವರ್ಷ ಬಿಜೆಪಿ ಸಖ್ಯ ತೊರೆದಿತ್ತು. ಇದಾದ ಬಳಿಕ ಇತ್ತೀಚೆಗೆ ಕೃಷಿ ಕಾಯಿದೆ ವಿಚಾರದಲ್ಲಿ ಮುನಿಸಿಕೊಂಡು ಅಕಾಲಿ ದಳವೂ  ಎನ್‌ಡಿಎನಿಂದ ಹೊರ ಬಿದ್ದಿತ್ತು.

ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಸಂಬಂಧಿ ಕಾಯಿದೆಗಳನ್ನು ವಿರೋಧಿಸಿ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ದಿಲ್ಲಿಯಲ್ಲಿ ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಅಕ್ಕ ಪಕ್ಕದ ರಾಜ್ಯಗಳ ರೈತರೂ ಬಂದು ಸೇರ್ಪಡೆಯಾಗುತ್ತಿದ್ದಾರೆ. ಇದರ  ನಡುವೆಯೇ ಮಿತ್ರ ಪಕ್ಷದ ನಡೆಯಿಂದ ಬಿಜೆಪಿ ಆಘಾತಕ್ಕೊಳಗಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT