ಜೆಪಿ ನಡ್ಡಾ 
ದೇಶ

ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ: ಕೃಷಿ ಮಸೂದೆ ಬಗ್ಗೆ ರಾಹುಲ್ ಹಳೆಯ ಭಾಷಣ ಪ್ರಕಟಿಸಿದ ಜೆಪಿ ನಡ್ಡಾ 

ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.

ನವದೆಹಲಿ: ಕೃಷಿ ಕಾಯ್ದೆ ಬಗ್ಗೆ ಬಿಜೆಪಿ-ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದ ರಾಹುಲ್ ಗಾಂಧಿ ಅವರ ಹಳೆಯ ಭಾಷಣಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಪ್ರಕಟಿಸಿದ್ದಾರೆ.

ಲೋಕಸಭೆಯಲ್ಲಿ ಕೃಷಿ ಮಸೂದೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಈ ಕೃಷಿ ಕಾಯ್ದೆಗಳಿಂದಾಗಿ ರೈತರಿಗೆ ಮಧ್ಯವರ್ತಿಗಳಿಂದ ಮುಕ್ತಿ ದೊರೆಯಲಿದ್ದು, ತಮ್ಮ ಉತ್ಪನ್ನಗಳನ್ನು ಉದ್ಯಮಿಗಳಿಗೆ ನೇರವಾಗಿ ಮಾರಾಟ ಮಾಡಬಹುದು ಎಂದು ಹೇಳಿರುವುದು ಕಂಡುಬಂದಿದೆ. 

ಈಗ ಕೃಷಿ ಕಾಯ್ದೆಯನ್ನು ವಿರೋಧಿಸುತ್ತಿರುವ ರೈತರನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ ವಿರುದ್ಧ ಇದೇ ವಿಷಯವನ್ನಿಟ್ಟುಕೊಂಡು ಆರೋಪ ಮಾಡಿರುವ ಜೆಪಿ ನಡ್ಡಾ, ಈ ಹಿಂದೆ ನೀವೇ ಬೆಂಬಲಿಸಿದ್ದನ್ನು ಈಗ ವಿರೋಧಿಸುತ್ತಿದ್ದೀರಿ ಎಂದು ಆರೋಪಿಸಿದ್ದಾರೆ. 

"ರೈತರ ಪ್ರತಿಭಟನೆಯ ವಿಷಯದಲ್ಲಿ ಕಾಂಗ್ರೆಸ್ ನಾಯಕರು ರಾಜಕಾರಾಣ ಮಾಡುತ್ತಿದ್ದಾರೆ ಎಂದು ನಡ್ಡಾ ಆರೋಪಿಸಿದ್ದಾರೆ.

ರಾಹುಲ್ ಜೀ ಇದೇನು ಮ್ಯಾಜಿಕ್ ನಡೆಯುತ್ತಿದೆ, ಈ ಹಿಂದೆ ನೀವೇ ಒಪ್ಪಿದ್ದನ್ನು ಈಗ ನೀವೇ ವಿರೋಧಿಸುತ್ತಿದ್ದೀರಿ, ನಿಮಗೆ ದೇಶದ, ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಏನೂ ಆಗಬೇಕಿಲ್ಲ, ನಿಮಗೆ ಕೇವಲ ರಾಜಕಾರಣವಷ್ಟೇ ಮಾಡಬೇಕಿದೆ. ದೇಶದ ಜನತೆಗೆ, ರೈತರಿಗೆ ನಿಮ್ಮ ದ್ವಿಮುಖ ನೀತಿ ಅರ್ಥವಾಗಿದೆ ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT