ಜಮ್ಮು-ಕಾಶ್ಮೀರ 
ದೇಶ

ಜಮ್ಮು-ಕಾಶ್ಮೀರ: ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾಪಡೆಗಳು 

ಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿಗಳು ವಿಫಲಗೊಳಿಸಿದ್ದಾರೆ. 

ಪೂಂಚ್: ಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿಗಳು ವಿಫಲಗೊಳಿಸಿದ್ದಾರೆ. 

ಪೂಂಚ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು, ಆರು ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 

ಎಸ್ಎಸ್ ಪಿ ರಮೇಶ್ ಕುಮಾರ್ ಅಂಗ್ರಾಲ್ ಈ ಬಗ್ಗೆ ಮಾಹಿತಿ ನೀಡಿದ್ದು ವಿಶೇಷ ಕಾರ್ಯಪಡೆ ತಂಡ 49 ರಾಷ್ಟ್ರೀಯ ರೈಫಲ್ಸ್ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಮುಸ್ತಾಫಾ ಇಕ್ಬಾಲ್ ಹಾಗೂ ಮುರ್ತಾಜಾ ಇಕ್ಬಾಲ್ ಎಂಬುವವರನ್ನು ಬಂಧಿಸಿದ್ದು, ಮುಸ್ತಾಫಾನಿಗೆ ಪಾಕಿಸ್ತಾನದಿಂದ ಕರೆ ಬಂದಿತ್ತು ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. 

ಈ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಅವರಿಗೆ ಅರಿ ಗ್ರಾಮದಲ್ಲಿರುವ ದೇವಾಲಯದ ಮೇಲೆ ಬಾಂಬ್ ದಾಳಿ ನಡೆಸುವ ಟಾರ್ಗೆಟ್ ನೀಡಲಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದು ಗ್ರೆನೇಡ್ ನ್ನು ಹೇಗೆ ಬಳಕೆ ಮಾಡಬೇಕೆಂಬುದರ ಬಗ್ಗೆ ಮಾಹಿತಿಯನ್ನೊಳಗೊಂಡ ವಿಡಿಯೋವನ್ನೂ ಫೋನ್ ಗೆ ಕಳಿಸಲಾಗಿತ್ತು ಎಂಬ ಮಾಹಿತಿ ಬಹಿರಂಗಪಡಿಸಿದ್ದಾರೆ. ಆರೋಪಿಗಳ ಹೇಳಿಕೆಯ ಆಧಾರದಲ್ಲಿ ನಡೆಸಿದ ತಪಾಸಣೆ ನಡೆಸಿದಾಗ 6 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT