ಅಯ್ಯಪ್ಪ ಸ್ವಾಮಿ ದೇವಸ್ಥಾನ 
ದೇಶ

ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತ

ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ  ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ.

ಕೊಟ್ಟಾಯಂ: ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ  ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ.

ಮಂಡಲ ಪೂಜೆಯ ಮೊದಲ 39 ದಿನಗಳಲ್ಲಿ ಅರಾವಣ ಮಾರಾಟ ಮತ್ತು ಹುಂಡಿ ಸಂಗ್ರಹದಿಂದ ಬಂದ ಆದಾಯ ಸೇರಿದಂತೆ ದೇವಾಲಯದ ಒಟ್ಟು ಆದಾಯ 9.09 ಕೋಟಿ ರೂ ನಷ್ಟಿದೆ. ಆದರೆ, ಕಳೆದ ವರ್ಷದ ಮಂಡಲ ಪೂಜೆ ಅವಧಿಯಲ್ಲಿ ಒಟ್ಟು 165 ಕೋಟಿ ರೂ ಆದಾಯ ಸಂಗ್ರಹವಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೋವಿಡ್ -19 ತಡೆ ಕ್ರಮದಿಂದಾಗಿ ಈ ವರ್ಷ ಡಿ 24 ರವರೆಗೆ 71,706 ಭಕ್ತರಿಗೆ ಮಾತ್ರ ದೇವಾಲಯಕ್ಕೆ ಭೇಟಿ ನೀಡಲು ಅವಕಾಶವಿತ್ತು. 2019 ರಲ್ಲಿ ದಿನಕ್ಕೆ 5000 ದಿಂದ ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು.

ದೇವಾಲಯವನ್ನು ನಿರ್ವಹಿಸುವ ತಿರುವಂಕೂರು ದೇವಸ್ವಂ ಮಂಡಳಿಯು ತನ್ನ ಅಧೀನದಲ್ಲಿರುವ ಎಲ್ಲಾ 1250 ದೇವಾಲಯಗಳಿಗೆ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT