ಸೌರವ್ ಗಂಗೂಲಿ 
ದೇಶ

ರಾಜಕೀಯ ಪ್ರವೇಶ ಊಹಾಪೋಹದ ನಡುವೆಯೇ ಬಂಗಾಳ ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!

ಟೀಂ ಇಂಡಿಯಾ ಮಾಜಿ ನಾಯಕ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ದಾದಾ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ದಾದಾ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಹೌದು.. ಇಂದು ಬಿಸಿಸಿಐ ಅಧ್ಯಕ್ಷರು ಆಗಿರುವ ಸೌರವ್ ಗಂಗೂಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ಸಭೆಯ ನಂತರ ಅವರು ರಾಜಕೀಯ ಪ್ರವೇಶಿಸಬಹುದು ಎಂದು ಹೇಳಲಾಗುತ್ತಿದೆ. ಆದರೆ ಗಂಗೂಲಿ ಆಪ್ತರು ಮಾತ್ರ ಈ ಭೇಟಿಗೆ ರಾಜಕೀಯ  ಲೇಪನ ಬೇಡ ಎಂದು ಹೇಳಿದ್ದು, ಇದು ಕೇವಲ ವೈಯಕ್ತಿಕ ಹಾಗೂ ಸೌಹಾರ್ದ ಭೇಟಿಯಾಗಿತ್ತು ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಗಂಗೂಲಿ ಬಿಜೆಪಿಗೆ ಸೇರುವ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿವೆ. ಏತನ್ಮಧ್ಯೆ, ರಾಜ್ಯಪಾಲ ಜಗದೀಪ್ ಧಂಕರ್ ಅವರೊಂದಿಗಿನ ಗಂಗೂಲಿ ಅವರ ಈ ಭೇಟಿ ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದಾಗಿನಿಂದಲೇ ಅವರ ಬಿಜೆಪಿ  ಪ್ರವೇಶದ ಕುರಿತಾದ ಊಹಾಪೋಹಗಳು ತೀವ್ರಗೊಂಡಿವೆ ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಗಂಗೂಲಿ ಇದುವರೆಗೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಮೂಲಗಳು ನೀಡಿರುವ ವರದಿಗಳ ಪ್ರಕಾರ ಜನವರಿ 12ರಂದು ಸ್ವಾಮಿ ವಿವೆಕಾನಂದರ ಜಯಂತಿಯ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಲವರು ಬಿಜೆಪಿಯಲ್ಲಿ ಶಾಮೀಲಾಗಲಿದ್ದಾರೆ ಎನ್ನಲಾಗುತ್ತಿದೆ.  ಗಂಗೂಲಿ ಕೂಡ ಇದೆ ಕಾರ್ಯಕ್ರಮ ವೇಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷ ಸೌರವ್ ಗಂಗೂಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿಯಾಗಿದ್ದರು. ಈ ಭೇಟಿ ಬಳಿಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆ ಕುರಿತು ಮಾತುಗಳು ಕೇಳಿ ಬಂದಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

SCROLL FOR NEXT