ಅರುಣ್ ಜೇಟ್ಲಿ ಪ್ರತಿಮೆ ಅನಾವರಣ 
ದೇಶ

ದೆಹಲಿ ಪಿರೋಜ್‌ ಶಾ ಕೋಟ್ಲಾ ಮೈದಾನದಲ್ಲಿ ಅರುಣ್‌ ಜೇಟ್ಲಿ ಪ್ರತಿಮೆ ಅನಾವರಣಗೊಳಿಸಿದ ಅಮಿತ್‌ ಶಾ

ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಷಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.

ನವದೆಹಲಿ: ಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಶಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು.

ಈ ಕುರಿತು ಟ್ವೀಟ್‌ ಮಾಡಿದ ಅವರು, ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಅರುಣ್ ಜೇಟ್ಲಿ ಜಿ ಅವರಕೊಡುಗೆಯನ್ನು ಎಂದಿಗೂ ಮರೆಯಲಾಗದು. ರಾಷ್ಟ್ರದ ಪ್ರಗತಿಗೆ ತಮ್ಮ ಜೀವನವನ್ನು ಮೀಸಲಿರಿಸಿದ್ದ ಅವರ ಕೊರತೆ ಕಾಡುತ್ತಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ, ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟಿಗ ಶಿಖರ್ ಧವನ್, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿ ಉಪಸ್ಥಿತರಿದ್ದರು.

ಜೇಟ್ಲಿ ಅವರ ಸ್ಮರಣಾರ್ಥ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣವನ್ನು ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT