ಪ್ರಧಾನಿ ಮೋದಿ 
ದೇಶ

ಸರ್ಕಾರ ರೈತರನ್ನು ಬಲಪಡಿಸುವ ಕೆಲಸ ಮುಂದುವರಿಸಲಿದೆ: ಪ್ರಧಾನಿ ಮೋದಿ

ಕೃಷಿಗೆ ಉತ್ತೇಜನ ನೀಡಲು ಮತ್ತು ರೈತರನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಹಲವು ಐತಿಹಾಸಿಕ ಸುಧಾರಣೆಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ನವದೆಹಲಿ: ಕೃಷಿಗೆ ಉತ್ತೇಜನ ನೀಡಲು ಮತ್ತು ರೈತರನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಹಲವು ಐತಿಹಾಸಿಕ ಸುಧಾರಣೆಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್‌ವರೆಗೆ ತೆರಳುವ 100ನೇ "ಕಿಸಾನ್ ರೈಲಿಗೆ" ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ತಮ್ಮ ಸರ್ಕಾರದ ನೀತಿಗಳು ಸ್ಪಷ್ಟವಾಗಿವೆ ಮತ್ತು ಕೃಷಿ ಕ್ಷೇತ್ರವನ್ನು ಸುಧಾರಿಸುವಲ್ಲಿ ಪಾರದರ್ಶಕವಾಗಿದೆ ಎಂದು ಹೇಳಿದರು.

ರೈತರನ್ನು ಮತ್ತು ಕೃಷಿ ಕ್ಷೇತ್ರವನ್ನು ಸಂಪೂರ್ಣ ಬಲಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರಿಸಲಿದೆ ಎಂದರು.

ಕೇಂದ್ರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರೋಧಿಸಿ ಕಳೆದ ಒಂದು ತಿಂಗಳಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಆದರೆ ನೇರವಾಗಿ ಕೃಷಿ ಕಾನೂನುಗಳ ಪ್ರಸ್ತಾಪಿಸದೇ, ತಾವು ರೈತರ ಹಿತಾಸಕ್ತಿ ಕಾಪಾಡುತ್ತಿದ್ದು, ವಿರೋಧ ಪಕ್ಷಗಳು ಅವರನ್ನು ದಾರಿ ತಪ್ಪಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!