ನಿತೀಶ್ ಕುಮಾರ್ 
ದೇಶ

ಮುಖ್ಯಮಂತ್ರಿಯಾಗಲೇಬೇಕೆಂಬ ಹಠವಿಲ್ಲ: ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಹೇಳಿಕೆ

ನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನೂ ಕೂಡ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ. 

ಪಾಟ್ನಾ: ನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನೂ ಕೂಡ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ. 

ಅರುಣಾಚಲ ಪ್ರದೇಶದ ತನ್ನ ಆರು ಶಾಸಕರನ್ನು ಆಪೋಷಣ ಪಡೆದಿರುವ ಬಿಜೆಪಿ ವಿರುದ್ಧ ಜೆಡಿಯು ಇದೀಗ ತಿರುಗಿ ಬಿದ್ದಿದೆ. ಬಿಜೆಪಿ ವಿರುದ್ಧ ಜೆಡಿಯು ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಲು ಆರಂಭಿಸಿದ್ದಾರೆ.

ಈಗಗಾಲೇ ಬಿಜೆಪಿ ವಿರುದ್ಧ ಲವ್ ಜಿಹಾದ್ ಕುರಿತು ಅಪಸ್ವರ ಎತ್ತಿರುವ ಜೆಡಿಯು, ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಯ ಒತ್ತಡವನ್ನು ಹೆಚ್ಚಿಸುವ ರಣತಂತ್ರಕ್ಕೆ ಮೊರೆ ಹೋದಂತಿದೆ.

ಇದೀಗ ಖುದ್ದು ನಿತೀಶ್ ಕುಮಾರ್ ಅವರೇ ಅಖಾಡಕ್ಕಿಳಿದಿದ್ದು, ನನಗೆ ಮುಖ್ಯಮಂತ್ರಿಯಾಗಲೇಬೇಕೆಂಬ ಹಠವಿಲ್ಲ. ಬಿಹಾರ ಜನತೆಯ ಜನಾದೇಶಕ್ಕೆ ಅನುಗುಣವಾಗಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕೂಡ ಮುಖ್ಯಮಂತ್ರಿ ಮಾಡಬಹುದು ಎಂದು ತಿಳಿಸಿದ್ದಾರೆ. 

ಬಿಹಾರ ಜನತೆಯ ಜನಾದೇಶಕ್ಕೆ ಅನುಗುಣವಾಗಿ ಸಿಎಂ ಅಭ್ಯರ್ಥಿ ಆಯ್ಕೆಯಾಗಲಿ ಎಂದು ಈ ಹಿಂದೆ ಕೂಡ ಹೇಳಿದ್ದೆ. ಬೇಕಾದರೆ ಬಿಜೆಪಿ ತಮ್ಮದೇ ಅಭ್ಯರ್ಥಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ನಾವು ಅಧಿಕಾರಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ರಾಜ್ಯದ ಜನರ ಸೇವೆಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮುಖ್ಯಮಂತ್ರಿ ಪದವಿ ಬಿಟ್ಟುಕೊಡಲು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT