ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ 
ದೇಶ

ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ 

ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ. 

ನವದೆಹಲಿ: ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ. 

ಡಿ.29 ರಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರಾಘವ್ ಛಡ, ರೈತರಿಗೆ ಉಚಿತ ವೈಫೈ ವ್ಯವಸ್ಥೆ ಕಲ್ಪಿಸಲು ರೈತರ ಸೇವಾದಾರ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

ರೈತರು ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿರುವುದನ್ನು ನಾವು ಬಯಸುತ್ತೇವೆ. ಆದ್ದರಿಂದ ವೈಫೈ ಹಾಟ್ ಸ್ಪಾಟ್ ಗಳನ್ನು ಸ್ಥಾಪಿಸುವುದಕ್ಕೆ ಕೆಲವು ಪ್ರದೇಶಗಳನ್ನು ಗುರುತಿಸಿದ್ದೇವೆ, ಇದು ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಉಪಕ್ರಮವಾಗಿದೆ ಎಂದು ರಾಘವ್ ಛಡ ತಿಳಿಸಿದ್ದು ಬೇಡಿಕೆ ಹೆಚ್ಚಿದರೆ ಇನ್ನಷ್ಟು ವೈಫೈ ಸ್ಪಾಟ್ ಗಳನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ. 

ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಕಾನೂನುಗಳನ್ನು ವಿರೋಧಿಸಿ ಒಂದು ತಿಂಗಳಿನಿಂದ ಪಂಜಾಭ್-ಹರ್ಯಾಣ ಭಾಗದ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಬೆಂಬಲ ದೊರೆತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT