ಛೋಟಾ ರಾಜನ್ ಮತ್ತು ಮುನ್ನಾ ಭಜರಂಗಿ ಚಿತ್ರ 
ದೇಶ

ಅಂಚೆ ಚೀಟಿ ಮೇಲೆ ಛೋಟಾ ರಾಜನ್, ಮುನ್ನಾ ಭಜರಂಗಿ ಭಾವಚಿತ್ರ: ತನಿಖೆಗೆ ಆದೇಶ

ಭೂಗತ ಪಾತಕಿ ಛೋಟಾರಾಜನ್‌ ಮತ್ತು ಹತನಾಗಿರುವ ಗ್ಯಾಂಗ್‌ಸ್ಟರ್‌ ಮುನ್ನಾ ಭಜರಂಗಿ ಭಾವಚಿತ್ರವುಳ್ಳ ಅಂಚೆ ಚೀಟಿಯನ್ನು ಮುದ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಅಂಚೆ ವಿಭಾಗ ತನಿಖೆಗೆ ಆದೇಶಿಸಿದೆ. 

ಕಾನ್ಪುರ: ಭೂಗತ ಪಾತಕಿ ಛೋಟಾರಾಜನ್‌ ಮತ್ತು ಹತನಾಗಿರುವ ಗ್ಯಾಂಗ್‌ಸ್ಟರ್‌ ಮುನ್ನಾ ಭಜರಂಗಿ ಭಾವಚಿತ್ರವುಳ್ಳ ಅಂಚೆ ಚೀಟಿಯನ್ನು ಮುದ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಅಂಚೆ ವಿಭಾಗ ತನಿಖೆಗೆ ಆದೇಶಿಸಿದೆ. 

‘ಮೈ ಸ್ಟಾಂಪ್‌‘ ಯೋಜನೆಯಡಿ ರಾಜನ್ ಮತ್ತು ಭಜರಂಗಿಯ ಫೋಟೊಗಳಿರುವ ತಲಾ 12 ಅಂಚೆ ಚೀಟಿಗಳನ್ನು ಕೆಲವು ವರ್ಷಗಳ ಹಿಂದೆ ಅಂಚೆ ಇಲಾಖೆ ಬಿಡುಗಡೆ ಮಾಡಿತ್ತು. ‘ಮೈ ಸ್ಟಾಂಪ್‘ ಯೋಜನೆ ನಿರ್ವಹಿಸುವ ವಿಭಾಗದ ಲೋಪದಿಂದಾಗಿ ಇಂಥ ಘಟನೆ ನಡೆದಿದೆ‘ ಎಂದು ಹೇಳಿರುವ ಪೋಸ್ಟ್‌ಮಾಸ್ಟರ್‌  ಜನರಲ್ ವಿ.ಕೆ.ವರ್ಮಾ, ‘ಈ ಕುರಿತು ತನಿಖೆಗೆ ಆದೇಶಿಸಲಾಗಿದೆ‘ ಎಂದು ತಿಳಿಸಿದರು.

ಅಪರಿಚಿತ ವ್ಯಕ್ತಿಯೊಬ್ಬ 5 ರು. ಮೌಲ್ಯದ, 600 ರು ಮೊತ್ತ ನೀಡಿ ಇಲಾಖೆಯಿಂದ ವೈಯಕ್ತಿಕ ಫೋಟೊಗಳನ್ನು ಮುದ್ರಿಸಿದ ಅಂಚೆ ಚೀಟಿಗಳನ್ನು ಖರೀದಿಸಿದ್ದಾನೆ. ಅಗತ್ಯವಿರುವ ಗುರುತಿನ ಚೀಟಿಯ ಪುರಾವೆಗಳಿಲ್ಲದೇ ವ್ಯಕ್ತಿಯೊಬ್ಬ ‘ಮೈ ಸ್ಟಾಂಪ್‘ ಯೋಜನೆಯಡಿ ಫೋಟೊ ಸಹಿತ ಅಂಚೆ ಚೀಟಿಯನ್ನು ಖರೀದಿಸಿದ್ದಾನೆ. ಅದನ್ನು ಇಲಾಖೆ ಬಿಡುಗಡೆ ಮಾಡಿದೆ. 

ಈ ವಿಚಾರದಲ್ಲಿ ತಪ್ಪಿತಸ್ಥರಾಗಿರುವ ಅಂಚೆ ಚೀಟಿ ವಿಭಾಗದ ಉಸ್ತುವಾರಿ ರಜನೀಶ್ ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದ ವರ್ಮಾ, ‘ಕೆಲವು ನೌಕರರಿಗೆ ‌ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಇಲಾಖೆಯ ಕೆಲವು ಸಿಬ್ಬಂದಿಗೆ ಶೋಕಾಸ್ ನೊಟೀಸ್ ನೀಡಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಇಂತ ತಪ್ಪು ಪುನಾರವರ್ತನೆಯಾಗದಂತೆ ಮಾಡಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT