ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಸಂಕಷ್ಟ: ಆರ್ ಜೆಡಿಗೆ ಜೆಡಿ(ಯು) ಪಕ್ಷದ 17 ಶಾಸಕರು?

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಂಯುಕ್ತ ಜನತಾದಳ(ಜೆಡಿಯು) ಪಕ್ಷದ ಶಾಸಕರು, ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಸೇರಲಿದ್ದಾರೆ ಎಂದು ಆರ್ ಜೆ ಡಿ ನಾಯಕ ಶ್ಯಾಮ್ ರಜಾಕ್ ಹೇಳಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಂಯುಕ್ತ ಜನತಾದಳ(ಜೆಡಿಯು) ಪಕ್ಷದ ಶಾಸಕರು, ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಸೇರಲಿದ್ದಾರೆ ಎಂದು ಆರ್ ಜೆ ಡಿ ನಾಯಕ ಶ್ಯಾಮ್ ರಜಾಕ್ ಹೇಳಿದ್ದಾರೆ.

ಜೆಡಿ(ಯು)ಪಕ್ಷದ 17 ಶಾಸಕರು ಯಾವುದೇ ಕ್ಷಣದಲ್ಲಿ ಆರ್‌ಜೆಡಿ ಸೇರಬಹುದು ಎಂದು ಅವರು ತಿಳಿಸಿದ್ದಾರೆ. ಆದರೆ, ತಾವು ಪಕ್ಷಾಂತರ ನಿಷೇಧ ಕಾಯ್ದೆ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ, 28 ಶಾಸಕರು ಒಗ್ಗೂಡಿ ಬಂದರೆ ಮಾತ್ರ ಪಕ್ಷವನ್ನು ಸೇರಲು ಆಹ್ವಾನಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

17 ಜೆಡಿ(ಯು) ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಆರ್‌ಜೆಡಿಗೆ ಸೇರಲು ಸಿದ್ಧರಾಗಿದ್ದಾರೆ. ಯಾವುದೇ ಕ್ಷಣದಲ್ಲಿ ಇದು ಸಂಭವಿಸಬಹುದು. ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಂದಿನಿಂದಲೂ ನಾವು ಅದನ್ನು ಉಲ್ಲಂಘಿಸಿಲ್ಲ. ಆದರೆ, ನಾವು ಅವರಿಗೆ ಒಂದು ವಿಷಯವನ್ನು ಸ್ಪಷ್ಟಪಡಿಸಿದ್ದೇವೆ. 28 ಶಾಸಕರು ಏಕಕಾಲದಲ್ಲಿ ಬಂದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ. ಶೀಘ್ರದಲ್ಲೇ ಈ ಸಂಖ್ಯೆ 28ಕ್ಕೆ ತಲುಪುವ ಸಾಧ್ಯತೆ ಇದೆ ”ಎಂದು ಶ್ಯಾಮ್ ರಜಾಕ್ ಹೇಳಿದ್ದಾರೆ.

ಆದರೆ, ರಜಾಕ್ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಆರ್‌ಜೆಡಿ ಹೇಳಿಕೆಗಳು ಆಧಾರರಹಿತವಾಗಿದ್ದು, ತಮ್ಮ ಪಕ್ಷದ ಯಾವುದೇ ಶಾಸಕರು ಅನ್ಯ ಪಕ್ಷಕ್ಕೆ ಹೋಗುವ ಸಾಧ್ಯತೆ ಇಲ್ಲ. ಆರ್‌ಜೆಡಿ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿ(ಯು), ಆರ್‌ಜೆಡಿ ಹಾಗೂ ಬಿಜೆಪಿಗಿಂತ ಕಡಿಮೆ ಸ್ಥಾನಗಳಲ್ಲಿ ಗೆದ್ದಿದೆ. ವಾಸ್ತವವಾಗಿ, ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದರೂ, ಚುನಾವಣಾ ಒಪ್ಪಂದದಂತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಆದರೆ, ಪ್ರತಿಪಕ್ಷಗಳು, ಜೆಡಿ(ಯು) ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ ಎಂಬ ವದಂತಿಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT