ಸಿಟಿ ರವಿ 
ದೇಶ

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಅವರು ಬುಧವಾರ ಹೇಳಿದ್ದಾರೆ.

"ತಮಿಳುನಾಡಿನಲ್ಲಿ, ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದಲ್ಲಿ ಅತಿದೊಡ್ಡ ಪಾಲುದಾರ ಪಕ್ಷ. ಹೀಗಾಗಿ ಆ ಪಕ್ಷದವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸಹಜ. ಪ್ರಸ್ತುತ, ಇಕೆ ಪಳನಿಸ್ವಾಮಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎನ್‌ಡಿಎ ಸಮನ್ವಯ ಸಮಿತಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಲಿದೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದಿ. ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜನರ ಸ್ನೇಹಿ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ತಮಿಳುನಾಡನ್ನು ಸಮೃದ್ಧಿಯ ಹೆದ್ದಾರಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಿಟಿ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಳನಿಸ್ವಾಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಐಎಡಿಎಂಕೆ ನಾಯಕ ಒ ಪನ್ನೀರ್ ಸೇಲ್ವಂ ಅವರು ಕಳೆದ ಸೆಪ್ಟೆಂಬರ್ ನಲ್ಲಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!

ಆಕೆ ಹಿಂದೆಂದೂ ಬುರ್ಖಾ ಸಹ ಧರಿಸಿರಲಿಲ್ಲ, ಶಾಹೀನ್ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾಳೆ ಎಂಬುದು ನಮಗೆ ನಂಬಲು ಇನ್ನೂ ಅಸಾಧ್ಯ- ಮಾಜಿ ಪತಿ, ಸಹೋದರ

ದೆಹಲಿ ಸ್ಫೋಟ ಕೇಂದ್ರ 'ಸರ್ಕಾರದ ವೈಫಲ್ಯ': ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್

ಎಲೆಕ್ಷನ್ ಗೆಲವಿನ ಕತೆ ಹಾಗಿರಲಿ, ಬಿಹಾರ ಗೆಲ್ಲುವುದು ಯಾವಾಗ ಎಂಬುದೇ ಪ್ರಶ್ನೆ (ತೆರೆದ ಕಿಟಕಿ)

SCROLL FOR NEXT