ಸಿಟಿ ರವಿ 
ದೇಶ

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಎನ್ ಡಿಎ ಸಿಎಂ ಅಭ್ಯರ್ಥಿ ಪ್ರಕಟ: ಸಿಟಿ ರವಿ

ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ...

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾದ ನಂತರ ಎನ್‌ಡಿಎ ಸಮನ್ವಯ ಸಮಿತಿ, ಎನ್ ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಅತಿ ದೊಡ್ಡ ಮೈತ್ರಿ ಪಕ್ಷ ಎಎಐಡಿಎಂಕೆಯವರಾಗಿರುತ್ತಾರೆ ಎಂದು ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ ಅವರು ಬುಧವಾರ ಹೇಳಿದ್ದಾರೆ.

"ತಮಿಳುನಾಡಿನಲ್ಲಿ, ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟದಲ್ಲಿ ಅತಿದೊಡ್ಡ ಪಾಲುದಾರ ಪಕ್ಷ. ಹೀಗಾಗಿ ಆ ಪಕ್ಷದವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಸಹಜ. ಪ್ರಸ್ತುತ, ಇಕೆ ಪಳನಿಸ್ವಾಮಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎನ್‌ಡಿಎ ಸಮನ್ವಯ ಸಮಿತಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಲಿದೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದಿ. ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜನರ ಸ್ನೇಹಿ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ತಮಿಳುನಾಡನ್ನು ಸಮೃದ್ಧಿಯ ಹೆದ್ದಾರಿಯಲ್ಲಿ ಕೊಂಡೊಯ್ಯುವುದು ನಮ್ಮ ಗುರಿ ಎಂದು ಸಿಟಿ ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಪಳನಿಸ್ವಾಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಐಎಡಿಎಂಕೆ ನಾಯಕ ಒ ಪನ್ನೀರ್ ಸೇಲ್ವಂ ಅವರು ಕಳೆದ ಸೆಪ್ಟೆಂಬರ್ ನಲ್ಲಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

SCROLL FOR NEXT