ಸಂಗ್ರಹ ಚಿತ್ರ 
ದೇಶ

ಮೇ 4 ರಿಂದ ಜೂನ್ 10 ರವರೆಗೆ ಸಿಬಿಎಸ್ಇ ಬೋರ್ಡ್ ಪರೀಕ್ಷೆ; ಜುಲೈ 15ಕ್ಕೆ ಫಲಿತಾಂಶ: ಕೇಂದ್ರ ಶಿಕ್ಷಣ ಸಚಿವಾಲಯ

ಸಿಬಿಎಸ್‌ಇ ಬೋರ್ಡ್‌ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿಲಿದ್ದು ಜೂನ್‌ 10ರ ವರೆಗೂ ನಡೆಯಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ.

ನವದೆಹಲಿ: ಸಿಬಿಎಸ್‌ಇ ಬೋರ್ಡ್‌ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿಲಿದ್ದು ಜೂನ್‌ 10ರ ವರೆಗೂ ನಡೆಯಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ.

ಗುರುವಾರ ಮಾತನಾಡಿದ ಅವರು, ಜೂನ್‌ 10ರ ವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳ ಫಲಿತಾಂಶ ಜುಲೈ 15ರಂದು ಪ್ರಕಟವಾಗಲಿದೆ. ಶಾಲೆಗಳು ಹತ್ತು ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಯೋಗ, ಪ್ರಾಜೆಕ್ಟ್‌ ಹಾಗೂ ಇಂಟರ್‌ನಲ್‌ ಅಸೆಸ್ಮೆಂಟ್‌ಗಳನ್ನು ಮಾರ್ಚ್‌ 1ರಿಂದ ನಡೆಸಬಹುದಾಗಿದೆ.  ಇದಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಸಿಬಿಎಸ್‌ಇ ಶೀಘ್ರದಲ್ಲಿಯೇ ಹೊರಡಿಸಲಿದೆ ಎಂದು ಹೇಳಿದರು.

ದೇಶದಲ್ಲಿ ಕೊರೊನಾ ವೈರಸ್ ಸ್ಫೋಟವಾದ ಹಿನ್ನೆಲೆಯಲ್ಲಿ, ಶಿಕ್ಷಣ ಸಚಿವಾಲಯ ಈ ಹಿಂದೆ ಸಿಬಿಎಸ್ ಇ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿತ್ತು. ಸಾಮಾನ್ಯವಾಗಿ ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತವೆ ಮತ್ತು ಪ್ರತಿ ವರ್ಷ ಫೆಬ್ರವರಿತಿಂಗಳಲ್ಲಿ ಸಿದ್ಧಾಂತ ಪರೀಕ್ಷೆಗಳು  ಆರಂಭವಾಗಿ ಮಾರ್ಚ್ ನಲ್ಲಿ ಮುಕ್ತಾಯವಾಗುತ್ತವೆ.

ಸಿಬಿಎಸ್ ಇ 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ ನಡೆಸಲಾಗುತ್ತದೆ. ದೇಶದಲ್ಲಿ ಕೋವಿಡ್‌-19 ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪಠ್ಯಕ್ರಮವನ್ನ ಸಹ ಕಡಿಮೆ ಮಾಡಲಾಗಿದೆ. ವೈರಸ್ ಹರಡುವಿಕೆಯನ್ನ ಕಡಿಮೆ ಮಾಡಲು ಮಾರ್ಚ್ ನಿಂದ ಭಾರತದಲ್ಲಿ  ಶಾಲೆಗಳನ್ನು ಮುಚ್ಚಲಾಗಿದೆ.

ಇನ್ನು ಈಗಾಗಲೇ ಕೆಲ ಶಾಲೆಗಳು ಸಿಬಿಎಸ್ಇ ಬೋರ್ಡ್ ಪೂರ್ವಭಾವಿ ಸಿದ್ಧತಾ ಪರೀಕ್ಷೆಗಳನ್ನು ಆನ್ ಲೈನ್ ನಲ್ಲಿ ನಡೆಸಿದ್ದು, ಇದರಿಂದ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಸಿದ್ಧತೆ ನಡೆಸಲು ನೆರವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT