ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಎನ್‌ಕೌಂಟರ್‌ ಆದ 3 ಉಗ್ರರು ಮುಗ್ಧರು ಎಂದ ಸಂಬಂಧಿಗಳು, ತನಿಖೆ ಆರಂಭಿಸಿದ ಪೊಲೀಸರು

ಭದ್ರತಾ ಪಡೆಗಳು ಲಾವಪೊರಾದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರು ಯುವಕರು ಮುಗ್ಧರಾಗಿದ್ದು, ಯಾವುದೇ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.

ಶ್ರೀನಗರ: ಭದ್ರತಾ ಪಡೆಗಳು ಲಾವಪೊರಾದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರು ಯುವಕರು ಮುಗ್ಧರಾಗಿದ್ದು, ಯಾವುದೇ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. ಇನ್ನು ಈ ಮೂವರು ತಮ್ಮ ಉಗ್ರರ ಪಟ್ಟಿಯಲ್ಲಿಲ್ಲ ಎಂದಿರುವ ಪೊಲೀಸರು, ಈ ಕುರಿತು ಸಮಗ್ರ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಮೃತ ಯುವಕರಾದ ಜುಬೈರ್ ಅಹ್ಮದ್ ಲೋನ್, ಪುಲ್ವಾಮಾ ಮೂಲದ ಐಜಾಜ್ ಮಕ್ಬೂಲ್ ಗಣೈ(ಪದವಿಪೂರ್ವ ವಿದ್ಯಾರ್ಥಿ) ಮತ್ತು ಅಥರ್ ಮುಷ್ತಾಕ್ (11 ನೇ ತರಗತಿ ವಿದ್ಯಾರ್ಥಿ) ನಿರಪರಾಧಿಗಳಾಗಿದ್ದು, ಯಾವುದೇ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಸಂಬಂಧಿಗಳು ಹೇಳಿದ್ದಾರೆ.

ಐಜಾಜ್ ಅವರ ತಂದೆ ಪೊಲೀಸರಾಗಿದ್ದಾರೆ ಮತ್ತು ಜುಬೈರ್ ಅವರ ಇಬ್ಬರು ಸಹೋದರರು ಸಹ ಪೊಲೀಸರಾಗಿದ್ದಾರೆ.

ನನ್ನ ಮೊಮ್ಮಗ ನಿರಪರಾಧಿ ಮತ್ತು ಮುಗ್ಧನಾಗಿದ್ದು, ಆತನನ್ನು ಏಕೆ ಹತ್ಯೆ ಮಾಡಿದರು ಎಂಬುದು ಗೊತ್ತಿಲ್ಲ ಎಂದು ಐಜಾಜ್ ಅವರ ಅಜ್ಜ ಬಶೀರ್ ಅಹ್ಮದ್ ಗನೈ ಅವರು ಹೇಳಿದ್ದಾರೆ.

“ನನ್ನ ಮೊಮ್ಮಗನನ್ನು ಬಂಧಿಸಿ, ಕ್ಯಾಬ್ ನಲ್ಲಿ ಕರೆತಂದು ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಅವರು ಪ್ರತಿ ಕಾಶ್ಮೀರಿಗಳನ್ನು ಕೊಲ್ಲಲು ಬಯಸುತ್ತಾರೆ” ಎಂದು ಗನೈ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT