ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವಿಶ್ವವಿದ್ಯಾಲಯಗಳಲ್ಲಿ 'ಕಾಮಧೇನು ಪೀಠ' ಸ್ಥಾಪನೆಗೆ ಗೋ ಆಯೋಗ ಮನವಿ

ಸ್ವದೇಶಿ ಗೋ ತಳಿಗಳ ಮೇಲಿನ ಸಂಶೋಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕಾಮಧೇನು ಪೀಠ ಸ್ಥಾಪಿಸುವಂತೆ ಉತ್ತರ ಪ್ರದೇಶ ಗೋ ಸೇವಾ ಆಯೋಗ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮನವಿ ಮಾಡಿದೆ.

ಲಖನೌ: ಸ್ವದೇಶಿ ಗೋ ತಳಿಗಳ ಮೇಲಿನ ಸಂಶೋಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕಾಮಧೇನು ಪೀಠ ಸ್ಥಾಪಿಸುವಂತೆ ಉತ್ತರ ಪ್ರದೇಶ ಗೋ ಸೇವಾ ಆಯೋಗ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮನವಿ ಮಾಡಿದೆ.

ಅಲಹಾಬಾದ್ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಂಗೀತಾ ಶ್ರೀವಾಸ್ತವ ಇತ್ತೀಚಿಗೆ ಗೋ ಪೀಠ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ್ದರು. ಇದರಿಂದ ಪ್ರೇರಿತರಾಗಿರುವ  ಗೋ ಆಯೋಗ ಇದೀಗ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಗೋ ಪೀಠ ಸ್ಥಾಪಿಸಬೇಕೆಂದು ಕೋರಿದೆ. 

ಕೃಷಿ ಹಿನ್ನೆಲೆ ಮತ್ತು ರಾಜ್ಯದ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಲ್ಲಿ ಸ್ಥಳೀಯ ಹಸು ತಳಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಇದು ಬಹಳ ಅನುಕೂಲವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೋ ಸೇವಾ ಆಯೋಗದ ಹೆಚ್ಚುವರಿ ಸಾಂಖ್ಯಿಕ ಅಧಿಕಾರಿ ಅಮಿತ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಶ್ಯಾಮ್ ನಂದನ್ ಸಿಂಗ್, ಗೋ ಆಯೋಗದ ಮುಖ್ಯಸ್ಥರಾಗಿದ್ದಾರೆ.

ಕ್ಯಾಂಪಸ್ ನಲ್ಲಿ  ಕಾಮಧೇನು ಪೀಠ ಸ್ಥಾಪಿಸುವ ಪ್ರಸ್ತಾವವನ್ನು ಅನುಮೋದನೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ  ಅಲಹಾಬಾದ್ ವಿಶ್ವವಿದ್ಯಾಲಯ ಕಳುಹಿಸಿದೆ. ಸ್ಥಳೀಯ ಹಸುಗಳಿಗೆ ಸಂಬಂಧಿಸಿದ ವಿಜ್ಞಾನ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಸಂಶೋಧನೆ ಮತ್ತು ತರಬೇತಿಗಾಗಿ ಒಂದು ವೇದಿಕೆಯ ಅಗತ್ಯವಿದೆ ಎಂದು ಗೋ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಗ್ರಾಮೀಣ ಪ್ರದೇಶಗಳಲ್ಲಿ ವಯಸ್ಸಾದ ಗೋ ರಕ್ಷಣೆಗಾಗಿ ಪ್ರಯತ್ನ ನಡೆಸಲಾಗುತ್ತಿದೆ. ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಗೋವುಗಳಿಗೆ ಮೇವು ಮತ್ತು ಔಷಧಿಯನ್ನು ರಿಯಾಯಿತಿ ದರದಲ್ಲಿ ಪೂರೈಸಲಿದ್ದಾರೆ. ಇದಲ್ಲದೇ, ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರವನ್ನು ನಿರ್ಧರಿಸಲಾಗುವುದು ಎಂದು ಆಯೋಗದ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್