ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವಿಶ್ವವಿದ್ಯಾಲಯಗಳಲ್ಲಿ 'ಕಾಮಧೇನು ಪೀಠ' ಸ್ಥಾಪನೆಗೆ ಗೋ ಆಯೋಗ ಮನವಿ

ಸ್ವದೇಶಿ ಗೋ ತಳಿಗಳ ಮೇಲಿನ ಸಂಶೋಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕಾಮಧೇನು ಪೀಠ ಸ್ಥಾಪಿಸುವಂತೆ ಉತ್ತರ ಪ್ರದೇಶ ಗೋ ಸೇವಾ ಆಯೋಗ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮನವಿ ಮಾಡಿದೆ.

ಲಖನೌ: ಸ್ವದೇಶಿ ಗೋ ತಳಿಗಳ ಮೇಲಿನ ಸಂಶೋಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕಾಮಧೇನು ಪೀಠ ಸ್ಥಾಪಿಸುವಂತೆ ಉತ್ತರ ಪ್ರದೇಶ ಗೋ ಸೇವಾ ಆಯೋಗ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮನವಿ ಮಾಡಿದೆ.

ಅಲಹಾಬಾದ್ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಂಗೀತಾ ಶ್ರೀವಾಸ್ತವ ಇತ್ತೀಚಿಗೆ ಗೋ ಪೀಠ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ್ದರು. ಇದರಿಂದ ಪ್ರೇರಿತರಾಗಿರುವ  ಗೋ ಆಯೋಗ ಇದೀಗ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಗೋ ಪೀಠ ಸ್ಥಾಪಿಸಬೇಕೆಂದು ಕೋರಿದೆ. 

ಕೃಷಿ ಹಿನ್ನೆಲೆ ಮತ್ತು ರಾಜ್ಯದ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಲ್ಲಿ ಸ್ಥಳೀಯ ಹಸು ತಳಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಇದು ಬಹಳ ಅನುಕೂಲವಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೋ ಸೇವಾ ಆಯೋಗದ ಹೆಚ್ಚುವರಿ ಸಾಂಖ್ಯಿಕ ಅಧಿಕಾರಿ ಅಮಿತ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಶ್ಯಾಮ್ ನಂದನ್ ಸಿಂಗ್, ಗೋ ಆಯೋಗದ ಮುಖ್ಯಸ್ಥರಾಗಿದ್ದಾರೆ.

ಕ್ಯಾಂಪಸ್ ನಲ್ಲಿ  ಕಾಮಧೇನು ಪೀಠ ಸ್ಥಾಪಿಸುವ ಪ್ರಸ್ತಾವವನ್ನು ಅನುಮೋದನೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ  ಅಲಹಾಬಾದ್ ವಿಶ್ವವಿದ್ಯಾಲಯ ಕಳುಹಿಸಿದೆ. ಸ್ಥಳೀಯ ಹಸುಗಳಿಗೆ ಸಂಬಂಧಿಸಿದ ವಿಜ್ಞಾನ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಸಂಶೋಧನೆ ಮತ್ತು ತರಬೇತಿಗಾಗಿ ಒಂದು ವೇದಿಕೆಯ ಅಗತ್ಯವಿದೆ ಎಂದು ಗೋ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಗ್ರಾಮೀಣ ಪ್ರದೇಶಗಳಲ್ಲಿ ವಯಸ್ಸಾದ ಗೋ ರಕ್ಷಣೆಗಾಗಿ ಪ್ರಯತ್ನ ನಡೆಸಲಾಗುತ್ತಿದೆ. ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಗೋವುಗಳಿಗೆ ಮೇವು ಮತ್ತು ಔಷಧಿಯನ್ನು ರಿಯಾಯಿತಿ ದರದಲ್ಲಿ ಪೂರೈಸಲಿದ್ದಾರೆ. ಇದಲ್ಲದೇ, ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರವನ್ನು ನಿರ್ಧರಿಸಲಾಗುವುದು ಎಂದು ಆಯೋಗದ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT