ದೇಶ

'ನಿರ್ಭಯಾ' ಪ್ರಕರಣ: ಅಪರಾಧಿ ವಿನಯ್ ಶರ್ಮ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಕೋವಿಂದ್ 

2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ತಿರಸ್ಕರಿಸಿದ್ದಾರೆ.

ನವದೆಹಲಿ: 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ತಿರಸ್ಕರಿಸಿದ್ದಾರೆ.


ಗಲ್ಲು ಶಿಕ್ಷೆಯಿಂದ ಪಾರಾಗಲು ತನ್ನ ಮನವಿಯನ್ನು ಆಲಿಸುವಂತೆ ಕಳೆದ ಬುಧವಾರ ವಿನಯ್ ಶರ್ಮ ಪರ ವಕೀಲ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ವಿನಯ್ ಶರ್ಮ ಪರ ವಕೀಲ ಎ ಪಿ ಸಿಂಗ್, ಜೈಲಿನಲ್ಲಿ ವಿನಯ್ ಶರ್ಮ ವಿಚಾರಣೆ ವೇಳೆಯೇ ಆತನಿಗೆ ಸಾಕಷ್ಟು ಹಿಂಸೆ ನೀಡಿದ್ದಾರೆ. ಹೀಗಾಗಿ ಗಲ್ಲು ಶಿಕ್ಷೆಯಿಂದಲಾದರೂ ಪಾರು ಮಾಡಬೇಕು ಎಂದಿದ್ದರು. 
ಸುಪ್ರೀಂ ಕೋರ್ಟ್ ಈಗಾಗಲೇ ವಿನಯ್ ಶರ್ಮ ಅವರ ಕ್ಯುರೇಟಿವ್ ಅರ್ಜಿಯನ್ನು ತಿರಸ್ಕರಿಸಿದೆ.


ನಿನ್ನೆ ದೆಹಲಿ ಕೋರ್ಟ್ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಾದ ವಿನಯ್ ಶರ್ಮ, ಅಕ್ಷಯ್ ಠಾಕೂರ್, ಪವನ್ ಗುಪ್ತಾ ಮತ್ತು ಮುಕೇಶ್ ಸಿಂಗ್ ಅವರ ಗಲ್ಲುಶಿಕ್ಷೆ ದಿನಾಂಕವನ್ನು ಮುಂದೂಡಿದೆ. ಇಲ್ಲದಿದ್ದರೆ ಇಂದು ಬೆಳಗ್ಗೆ ನಾಲ್ವರಿಗೂ ಗಲ್ಲುಶಿಕ್ಷೆಯಾಗಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT