ಅಖಿಲ ಭಾರತ ಹಿಂದೂ ಮಹಾಸಭಾ ನಾಯಕ ರಂಜಿತ್ ಶ್ರೀವಾಸ್ತವ 
ದೇಶ

ಲಕ್ನೊ: ಅಖಿಲ ಭಾರತೀಯ ಹಿಂದೂ ಮಹಾಸಭಾ ನಾಯಕನ ಹತ್ಯೆ 

ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಛತ್ತರ್ ಮಂಜಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರನ್ನು ರಂಜಿತ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ಅವರು ರಂಜಿತ್ ಶ್ರೀವಾಸ್ತವ್ ಅಲ್ಲ ರಂಜಿತ್ ಯಾದವ್ ಎನ್ನುತ್ತಿದ್ದಾರೆ.

ಲಕ್ನೊ: ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಛತ್ತರ್ ಮಂಜಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರನ್ನು ರಂಜಿತ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ಅವರು ರಂಜಿತ್ ಶ್ರೀವಾಸ್ತವ್ ಅಲ್ಲ ರಂಜಿತ್ ಯಾದವ್ ಎನ್ನುತ್ತಿದ್ದಾರೆ.


ಕಳೆದ ಅಕ್ಟೋಬರ್ ನಲ್ಲಿ ಮತ್ತೊಬ್ಬ ಬಲಪಂಥೀಯ ನಾಯಕ ಕಮಲೇಶ್ ತಿವಾರಿ ಅವರನ್ನು ಕೂಡ ಲಕ್ನೊದ ಅವರ ಕಚೇರಿಯಲ್ಲಿ ಹತ್ಯೆ ಮಾಡಲಾಗಿತ್ತು.


ಇಂದು ಬೆಳಗ್ಗೆ ಅವರು ವಾಯುವಿಹಾರ ಹೊರಟಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಂಜಿತ್ ಶ್ರೀವಾಸ್ತವ ಅವರ ತಲೆಗೆ ಹಲವು ಬುಲೆಟ್ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟರು.
ಈ ಸಂದರ್ಭದಲ್ಲಿ ಶ್ರೀವಾಸ್ತವ್ ಅವರ ಜೊತೆಗಿದ್ದ ಅವರ ಸೋದರನಿಗೂ ಗಾಯಗಳಾಗಿದ್ದು ಲಕ್ನೊದ ಕಿಂಗ್ ಜಾರ್ಜ್ ವೈದ್ಯಕೀಯ ವಿ.ವಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಒಸಿಆರ್ ಕಟ್ಟಡದಲ್ಲಿ ವಾಸಿಸುತ್ತಿದ್ದ ರಂಜಿತ್ ಶ್ರೀವಾಸ್ತವ ಅವರು ಗೋರಖ್ ಪುರಕ್ಕೆ ಸೇರಿದವರಾಗಿದ್ದಾರೆ.ಕಳೆದ ನಾಲ್ಕು ತಿಂಗಳಲ್ಲಿ ಹತ್ಯೆಯಾದ ರಾಜ್ಯದ ಎರಡನೇ ಹಿಂದೂ ನಾಯಕರು ರಂಜಿತ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT