ಅಖಿಲ ಭಾರತ ಹಿಂದೂ ಮಹಾಸಭಾ ನಾಯಕ ರಂಜಿತ್ ಶ್ರೀವಾಸ್ತವ 
ದೇಶ

ಲಕ್ನೊ: ಅಖಿಲ ಭಾರತೀಯ ಹಿಂದೂ ಮಹಾಸಭಾ ನಾಯಕನ ಹತ್ಯೆ 

ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಛತ್ತರ್ ಮಂಜಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರನ್ನು ರಂಜಿತ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ಅವರು ರಂಜಿತ್ ಶ್ರೀವಾಸ್ತವ್ ಅಲ್ಲ ರಂಜಿತ್ ಯಾದವ್ ಎನ್ನುತ್ತಿದ್ದಾರೆ.

ಲಕ್ನೊ: ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಛತ್ತರ್ ಮಂಜಿಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರನ್ನು ರಂಜಿತ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ಅವರು ರಂಜಿತ್ ಶ್ರೀವಾಸ್ತವ್ ಅಲ್ಲ ರಂಜಿತ್ ಯಾದವ್ ಎನ್ನುತ್ತಿದ್ದಾರೆ.


ಕಳೆದ ಅಕ್ಟೋಬರ್ ನಲ್ಲಿ ಮತ್ತೊಬ್ಬ ಬಲಪಂಥೀಯ ನಾಯಕ ಕಮಲೇಶ್ ತಿವಾರಿ ಅವರನ್ನು ಕೂಡ ಲಕ್ನೊದ ಅವರ ಕಚೇರಿಯಲ್ಲಿ ಹತ್ಯೆ ಮಾಡಲಾಗಿತ್ತು.


ಇಂದು ಬೆಳಗ್ಗೆ ಅವರು ವಾಯುವಿಹಾರ ಹೊರಟಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಂಜಿತ್ ಶ್ರೀವಾಸ್ತವ ಅವರ ತಲೆಗೆ ಹಲವು ಬುಲೆಟ್ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟರು.
ಈ ಸಂದರ್ಭದಲ್ಲಿ ಶ್ರೀವಾಸ್ತವ್ ಅವರ ಜೊತೆಗಿದ್ದ ಅವರ ಸೋದರನಿಗೂ ಗಾಯಗಳಾಗಿದ್ದು ಲಕ್ನೊದ ಕಿಂಗ್ ಜಾರ್ಜ್ ವೈದ್ಯಕೀಯ ವಿ.ವಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಒಸಿಆರ್ ಕಟ್ಟಡದಲ್ಲಿ ವಾಸಿಸುತ್ತಿದ್ದ ರಂಜಿತ್ ಶ್ರೀವಾಸ್ತವ ಅವರು ಗೋರಖ್ ಪುರಕ್ಕೆ ಸೇರಿದವರಾಗಿದ್ದಾರೆ.ಕಳೆದ ನಾಲ್ಕು ತಿಂಗಳಲ್ಲಿ ಹತ್ಯೆಯಾದ ರಾಜ್ಯದ ಎರಡನೇ ಹಿಂದೂ ನಾಯಕರು ರಂಜಿತ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?