ತಿರುಮಲದಲ್ಲಿ ರಥಸಪ್ತಮಿ: 2 ಲಕ್ಷ ಭಕ್ತರ ದಾಖಲೆಯ ಭೇಟಿ 
ದೇಶ

ತಿರುಮಲದಲ್ಲಿ ರಥಸಪ್ತಮಿ: 2 ಲಕ್ಷ ಭಕ್ತರ ದಾಖಲೆಯ ಭೇಟಿ

ರಥಸಪ್ತಮಿಯ ಅಂಗವಾಗಿ ತಿರುಪತಿಯ ತಿರುಮಲ ದೇಗಲಕ್ಕೆ 2 ಲಕ್ಷಕ್ಕೂ ಹೆಚ್ಚು ದಾಖಲೆಯ ಭಕ್ತರು ಭೇಟಿ ನೀಡಿದ್ದಾರೆ. 

ತಿರುಮಲ: ರಥಸಪ್ತಮಿಯ ಅಂಗವಾಗಿ ತಿರುಪತಿಯ ತಿರುಮಲ ದೇಗಲಕ್ಕೆ 2 ಲಕ್ಷಕ್ಕೂ ಹೆಚ್ಚು ದಾಖಲೆಯ ಭಕ್ತರು ಭೇಟಿ ನೀಡಿದ್ದಾರೆ. 

ರಥಸಪ್ತಮಿ ಅಂಗವಾಗಿ ಸೂರ್ಯ ಜಯಂತಿ ಎಂದು ಕರೆಯಲ್ಪಡುವ ಒಂದು ದಿನದ ಬ್ರಹ್ಮೋತ್ಸವವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಭಾಗಿಯಾಗಲು ಭಕ್ತರ ದಂಡೇ ಹರಿದುಬಂದಿತ್ತು. ಇವರನ್ನು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಟ್ರಸ್ಟ್ ವ್ಯವಸ್ಥಿತವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. 

ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮತ್ತಿತರರು ವೀಕ್ಷಕರ ಗ್ಯಾಲರಿಗೆ ಭೇಟಿ ನೀಡಿ ಸಿದ್ಧತೆಯ ಪರಿಶೀಲನೆ ನಡೆಸಿದರು. ದೇವರ ದರ್ಶನಕ್ಕಾಗಿ ಸಾಲುಗಟ್ಟಿ ನಿಂತ ಭಕ್ತರಿಗೆ ಅನ್ನಪ್ರಸಾದ, ಮಜ್ಜಿಗೆ ಮತ್ತು ನೀರನ್ನು ವಿತರಿಸಲಾಯಿತು. ಉತ್ಸವದ ಪ್ರಯುಕ್ತ  ಅನ್ನಪ್ರಸಾದದಲ್ಲಿ ಉಪ್ಪಿಟ್ಟು, ಪೊಂಗಲ್, ಶ್ಯಾವಿಗೆ ಉಪ್ಪಿಟ್ಟು, ಅನ್ನ ಸಾಂಬಾರ್, ಬಿಸಿಬೇಳೆ ಬಾತ್, ಟೊಮ್ಯಾಟೊ ರೈಸ್ ನಂತರ ವಿಶೇಷ ಆಹಾರವನ್ನು ತಯಾರಿಸಲಾಗಿತ್ತು. ಸಾವಿರಾರು ಸ್ವಯಂಸೇವಕರು ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಕೈಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT