ದೇಶ

ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ಮಹಾರಾಷ್ಟ್ರ ಕಡು ವಿರೋಧ

Srinivas Rao BV

ಮಹಾರಾಷ್ಟ್ರ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ಎನ್ ಆರ್ ಸಿ ಮತ್ತು ಎನ್ ಪಿ ಆರ್ ಅನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿರುವ ರಾಜ್ಯಗಳ ಪಾಲಿಗೆ ಈಗ ಮಹಾರಾಷ್ಟ್ರ ಕೂಡ ಸೇರಿಕೊಂಡಿದೆ. ಆದರೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಕುರಿತು ಮೃದು ಧೋರಣೆ ತಳೆದಿದ್ದು, ಸಿಎಎ ಯಾವುದೇ ಭಾರತೀಯರ  ಪೌರತ್ವನ್ನು ಕಿತ್ತುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
 

SCROLL FOR NEXT